Webdunia - Bharat's app for daily news and videos

Install App

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Krishnaveni K
ಗುರುವಾರ, 12 ಜೂನ್ 2025 (09:09 IST)
ಬೆಂಗಳೂರು: ಚಿನ್ನಸ್ವಾಮಿ ಮೈದಾನದ ಬಳಿ ಆರ್ ಸಿಬಿ ವಿಜಯೋತ್ಸವದ ದಿನ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ವಿರಾಟ್ ಕೊಹ್ಲಿ ಸ್ನೇಹಿತ ನಿಖಿಲ್ ಸೋಸಲೆ ಸೇರಿದಂತೆ ನಾಲ್ವರ ಭವಿಷ್ಯ ಇಂದು ತೀರ್ಮಾನವಾಗಲಿದೆ.

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ ಬಗ್ಗೆ ಇಂದು ಹೈಕೋರ್ಟ್ ನಲ್ಲಿ ತೀರ್ಪು ಬರಲಿದೆ. ನಿನ್ನೆ ಸರ್ಕಾರದ ಪರ ಮತ್ತು ಕೆಎಸ್ ಸಿಎ ಪರ ವಾದ ವಿವಾದಗಳು ಜೋರಾಗಿಯೇ ನಡೆದಿದ್ದವು. ಪ್ರಕರಣದ ಬಗ್ಗೆ ಸರ್ಕಾರದ ಪರ ವಾದ ಮಂಡಿಸಿದ್ದ ವಕೀಲರು ಆರ್ ಸಿಬಿ ಮತ್ತು ಕೆಎಸ್ ಸಿಯೇ ಕಾರ್ಯಕ್ರಮ ಆಯೋಜಿಸಿದ್ದು. ಇದರಲ್ಲಿ ಸರ್ಕಾರದ ತಪ್ಪಿಲ್ಲ ಎಂದು ವಾದ ಮಂಡಿಸಿದ್ದರು. ಇನ್ನು ಆರ್ ಸಿಬಿ ಸಿಬ್ಬಂದಿಗಳಾದ ನಿಖಿಲ್ ಸೋಸಲೆ ಸೇರಿದಂತೆ ನಾಲ್ವರು ರಾತ್ರೋ ರಾತ್ರಿ ಬೆಂಗಳೂರಿನಿಂದ ಪಲಾಯನ ಮಾಡಲು ಯತ್ನಿಸಿದ್ದರು ಎಂದು ವಾದಿಸಿದ್ದರು.

ಇನ್ನು, ಆರ್ ಸಿಬಿ ಪರ ವಾದ ಮಂಡಿಸಿರುವ ವಕೀಲರು ಪ್ರಕರಣದಲ್ಲಿ ಸರ್ಕಾರ ತನ್ನ ತಪ್ಪಿಲ್ಲ ಎನ್ನುತ್ತಿದೆ. ಆದರೆ ಕೆಎಸ್ ಸಿಎ ಸಲ್ಲಿಸಿದ ಪತ್ರವನ್ನು ಸರ್ಕಾರವೇ ನ್ಯಾಯಾಲಯದ ಮುಂದಿಟ್ಟಿದೆ. ಹೀಗಿರುವಾಗ ಸರ್ಕಾರಕ್ಕೆ ಗೊತ್ತೇ ಇರಲಿಲ್ಲ ಎನ್ನಲು ಹೇಗೆ ಸಾಧ್ಯ? ಅಲ್ಲದೆ, ಸಿಎಂ ಅಣತಿಯಂತೆ ಆರೋಪಿಗಳನ್ನು ಬಂಧಿಸಲಾಗಿದೆ. ಇದು ಕಾನೂನು ಬಾಹಿರ. ಹೀಗಾಗಿ ನಮ್ಮ ಕಕ್ಷಿದಾರರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ವಾದ ಮಂಡಿಸಿದ್ದರು. ಇಂದು ಆರೋಪಿಗಳ ಜಾಮೀನು ನಿರ್ಧಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments