Webdunia - Bharat's app for daily news and videos

Install App

Chinnaswamy stampede : ಪಹಲ್ಗಾಮ್ ದಾಳಿಗೆ ಕೇಂದ್ರದ ಮೇಲೆ ಗೂಬೆ ಕೂರಿಸಿದ್ರಿ ಈಗೇನಂತೀರಿ

Krishnaveni K
ಗುರುವಾರ, 5 ಜೂನ್ 2025 (14:27 IST)
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ರಾಜ್ಯ ಬಿಜೆಪಿ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ಈಗ ಯಾಕೆ ಮೌನವಾಗಿದೆ ಎಂದು ಪ್ರಶ್ನೆ ಮಾಡಿದೆ.
 
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಘಟಕ, ಪಹಲ್ಗಾಮ್ ದಾಳಿ ನಡೆದಾಗ ಕೇಂದ್ರದ ಮೇಲೆ ಗೂಬೆ ಕೂರಿಸಿದವರು ಈಗೆಲ್ಲಿದ್ದಾರೆ ಎಂದು ಪ್ರಶ್ನೆ ಮಾಡಿದೆ.
 
 
ಪಹಲ್ಗಾಮ್‌ ಉಗ್ರದಾಳಿ ನಡೆದಾಗ ಕೇಂದ್ರದ ಭದ್ರತಾ ವೈಫಲ್ಯದ ಬಗ್ಗೆ ದಿನನಿತ್ಯ ಕೂಗುಮಾರಿಗಳಂತೆ ಊಳಿಡುತ್ತಿದ್ದ ಕಾಂಗ್ರೆಸ್‌ ನಾಯಕರು ಈಗೆಲ್ಲಿದ್ದಾರೆ ? ಎಂದು ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ.
 
 
ಕೇಂದ್ರದ ವೈಫಲ್ಯ ಎಂದು ಸದಾ ಟೀಕಾ ಪ್ರಹಾರ ನಡೆಸುವ ಸಚಿವ ಸಂತೋಷ್ ಲಾಡ್, ಖರ್ಗೆ ಗೆ ಈಗ ಮಾತು ಬಂದ್ ಆಗಿದೆಯೇ ಎಂದು ಪ್ರಶ್ನೆ ಮಾಡಿದೆ.
 
ಪೂರ್ವ ನಿರ್ಧರಿತ ಕಾರ್ಯಕ್ರಮವೊಂದನ್ನು ನಿಭಾಯಿಸಲು ಸಾಧ್ಯವಾಗದ 
ಕಾಂಗ್ರೆಸ್
 ಪಕ್ಷದ ಶತಮೂರ್ಖರು ಕೇಂದ್ರ ಸರ್ಕಾರದ ನಿಲುವುಗಳನ್ನು ಟೀಕಿಸಿದ್ದರು. ಆರ್‌ಸಿಬಿ ವಿಜಯಯಾತ್ರೆಯನ್ನು ನಿರ್ವಹಿಸಲು ಸಾಕಷ್ಟು ಸಮಯ ಲಭಿಸಿದ್ದರೂ ಸರ್ಕಾರ ಸಂಪೂರ್ಣ ಎಡವಿದೆ.
 
ರಾಜ್ಯ ಸರ್ಕಾರದ ಭದ್ರತೆಯ ವೈಫಲ್ಯಕ್ಕೆ ಅಮಾಯಕರು ಬಲಿಯಾಗಿದ್ದಾರೆ. ಭದ್ರತಾ ವ್ಯವಸ್ಥೆಯ ಬಗ್ಗೆ ಕಾಂಗ್ರೆಸ್‌ ವಿದೂಷಕರು ತುಟಿ ಬಿಚ್ಚದಿರುವುದೇಕೆ? ಎಂದು ಪ್ರಶ್ನೆ ಮಾಡಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments