Webdunia - Bharat's app for daily news and videos

Install App

ಚಿಟ್ ಫಂಡ್: ಮೂವರು ವಂಚಕರ ಬಂಧನ

Webdunia
ಸೋಮವಾರ, 12 ನವೆಂಬರ್ 2018 (16:01 IST)
ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ.
ಚಿಟ್ ಫಂಡ್ ಫೈನಾನ್ಸ್ ಮೂಲಕ ಜನರಿಗೆ ಕೋಟ್ಯಂತರ ರೂ. ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಕೋಲಾರದ ಆರ್ ಕೆ ಎನ್ ರೈಸ್ ಮಿಲ್ ಮಾಲೀಕ ಷಣ್ಮುಗಂ, ಅವರ ಪುತ್ರ ದಿಲೀಪ್, ಫೈನಾನ್ಸ್ ಮ್ಯಾನೇಜರ್ ನಾಗರಾಜ ಬಂಧಿತರಾಗಿದ್ದಾರೆ.

ಬಂಗಾರಪೇಟೆಯಲ್ಲಿ ಆರ್ ಕೆ ಎನ್ ಚಿಟ್ಸ್ ಅಂಡ್ ಇನ್ವೆಸ್ಟಮೆಂಟ್ ಹೆಸರಿನಲ್ಲಿ ಷಣ್ಮುಗಂ ಲೇವಾದೇವಿ ವ್ಯವಹಾರ ಆರಂಭಿಸಿದ್ದರು. ಬಡ್ಡಿಯ ಆಸೆಗೆ ನೂರಾರು ಜನರು ಹಣ ಹೂಡಿಕೆ ಮಾಡಿದ್ದರು.

ಅಂದಾಜು 6 ಸಾವಿರ ಕೋಟಿ ರೂ. ಠೇವಣಿ ಪಡೆದು ಯಾವುದೇ ಲೆಕ್ಕ ತೋರಿಸದೆ ಇತರರಿಗೆ ಸಾಲ, ಎಲ್ ಐ ಸಿ ಬಾಂಡ್, ಜಮೀನು ಖರೀದಿ, ಹಣ ಲೇವಾದೇವಿಯಲ್ಲಿ ಕಂಪನಿ ಹಣ ತೊಡಗಿಸಿತ್ತು. ಕಂಪನಿ ನೀಡಿದ ಚೆಕ್ ಗಳು ಬೌನ್ಸ್ ಆಗಿದ್ದರಿಂದ ಗ್ರಾಹಕರು ದೂರು ದಾಖಲು ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments