ದೇವರು ಹೇಳಿದನಂತೆ; ತಾಯಿಯ ತಲೆ ಕಡಿದು ಬಾಗಿಲಲ್ಲಿಟ್ಟು ಪೂಜಿಸಿದ ಮಗ

Webdunia
ಬುಧವಾರ, 22 ಫೆಬ್ರವರಿ 2017 (09:34 IST)
ಪಾಪಿ ಮಗನೊಬ್ಬ ತನ್ನ ತಾಯಿಯ ತಲೆ ಕಡಿದು ಮನೆ ಬಾಗಿಲಲ್ಲಿಟ್ಟ ಬೀಭತ್ಸ, ಘೋರ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗೊಲ್ಲರಹಟ್ಟಿಯಲ್ಲಿ ನಡೆದಿದ್ದು ಸಂಪೂರ್ಣ ಜಿಲ್ಲೆ ಬೆಚ್ಚಿಬಿದ್ದಿದೆ.

ದೇವರ ಆದೇಶದಂತೆ ತಾನು ಈ ಕೃತ್ಯವನ್ನು ಮಾಡಿದ್ದೇನೆ ಎಂದು ಆರೋಪಿ ತಿಮ್ಮರಾಜು ಹೇಳುತ್ತಿದ್ದು ಮೃತ ಸಾವಿತ್ರಮ್ಮ 60 ವರ್ಷ ಪ್ರಾಯದವರಾಗಿದ್ದಾರೆ.
 
ನಿನ್ನೆ ರಾತ್ರಿ ತಾಯಿಯ ರುಂಡವನ್ನು ಕಡಿದು ಹತ್ಯೆ ಮಾಡಿದ ತಿಮ್ಮರಾಜು, ರುಂಡವನ್ನು ಬಾಗಿಲ ಬಳಿ ಇಟ್ಟು ಬಳಿಕ ಅದಕ್ಕೆ ಹೂವು, ಕುಂಕುಮ ಹಾಕಿ ಪೂಜೆ ಮಾಡಿದ್ದಾನೆ.
 
ತಿಮ್ಮರಾಜುವಿನ ಕೃತ್ಯದಿಂದ ಬೆಚ್ಚಿಬಿದ್ದ ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಹೊಳಲ್ಕೆರೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
 
ಪೊಲೀಸ್ ತನಿಖೆ ವೇಳೆ ತಿಮ್ಮರಾಜು ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದು ದೇವರು ಮೇಮೇಲೆ ಬಂದು ಈ ರೀತಿ ಮಾಡೆಂದು ಹೇಳಿದ, ಹೀಗಾಗಿ ಕೊಲೆಗೈದೆ ಎಂದಿದ್ದಾನೆ. 
 
ಎರಡು ವರ್ಷದ ಹಿಂದೆ ಪತ್ನಿ ದೂರವಾದ ಬಳಿಕ ತಿಮ್ಮರಾಜು ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಸದಾ ತಾಯಿಯೊಂದಿಗೆ ಜಗಳವಾಡಿಕೊಂಡಿರುತ್ತಿದ್ದ ಎಂದು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಂದೇಮಾತರಂನಲ್ಲಿ ದೇವರ ಹೆಸರು ಬರುತ್ತೆ, ದೇಶದಲ್ಲಿ ಎಲ್ಲಾ ಧರ್ಮದವರಿದ್ದಾರೆ ಹಾಗಾಗಿ ಹಾಡಬಾರದು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ನೋಂದಣಿ ಬಿಡಿ, ಮೊದಲು ಕಾಂಗ್ರೆಸ್ ನೋಂದಣಿ ರದ್ಧತಿ ಆಗದಂತೆ ನೋಡಿಕೊಳ್ಳಿ: ವಿಜಯೇಂದ್ರ

ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ಸಿದ್ದರಾಮಯ್ಯ ಬಣದ ಫಾರಿನ್ ಟೂರ್

ಮುಂದಿನ ಸುದ್ದಿ
Show comments