Webdunia - Bharat's app for daily news and videos

Install App

ದೇವರು ಹೇಳಿದನಂತೆ; ತಾಯಿಯ ತಲೆ ಕಡಿದು ಬಾಗಿಲಲ್ಲಿಟ್ಟು ಪೂಜಿಸಿದ ಮಗ

Webdunia
ಬುಧವಾರ, 22 ಫೆಬ್ರವರಿ 2017 (09:34 IST)
ಪಾಪಿ ಮಗನೊಬ್ಬ ತನ್ನ ತಾಯಿಯ ತಲೆ ಕಡಿದು ಮನೆ ಬಾಗಿಲಲ್ಲಿಟ್ಟ ಬೀಭತ್ಸ, ಘೋರ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗೊಲ್ಲರಹಟ್ಟಿಯಲ್ಲಿ ನಡೆದಿದ್ದು ಸಂಪೂರ್ಣ ಜಿಲ್ಲೆ ಬೆಚ್ಚಿಬಿದ್ದಿದೆ.

ದೇವರ ಆದೇಶದಂತೆ ತಾನು ಈ ಕೃತ್ಯವನ್ನು ಮಾಡಿದ್ದೇನೆ ಎಂದು ಆರೋಪಿ ತಿಮ್ಮರಾಜು ಹೇಳುತ್ತಿದ್ದು ಮೃತ ಸಾವಿತ್ರಮ್ಮ 60 ವರ್ಷ ಪ್ರಾಯದವರಾಗಿದ್ದಾರೆ.
 
ನಿನ್ನೆ ರಾತ್ರಿ ತಾಯಿಯ ರುಂಡವನ್ನು ಕಡಿದು ಹತ್ಯೆ ಮಾಡಿದ ತಿಮ್ಮರಾಜು, ರುಂಡವನ್ನು ಬಾಗಿಲ ಬಳಿ ಇಟ್ಟು ಬಳಿಕ ಅದಕ್ಕೆ ಹೂವು, ಕುಂಕುಮ ಹಾಕಿ ಪೂಜೆ ಮಾಡಿದ್ದಾನೆ.
 
ತಿಮ್ಮರಾಜುವಿನ ಕೃತ್ಯದಿಂದ ಬೆಚ್ಚಿಬಿದ್ದ ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಹೊಳಲ್ಕೆರೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
 
ಪೊಲೀಸ್ ತನಿಖೆ ವೇಳೆ ತಿಮ್ಮರಾಜು ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದು ದೇವರು ಮೇಮೇಲೆ ಬಂದು ಈ ರೀತಿ ಮಾಡೆಂದು ಹೇಳಿದ, ಹೀಗಾಗಿ ಕೊಲೆಗೈದೆ ಎಂದಿದ್ದಾನೆ. 
 
ಎರಡು ವರ್ಷದ ಹಿಂದೆ ಪತ್ನಿ ದೂರವಾದ ಬಳಿಕ ತಿಮ್ಮರಾಜು ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಸದಾ ತಾಯಿಯೊಂದಿಗೆ ಜಗಳವಾಡಿಕೊಂಡಿರುತ್ತಿದ್ದ ಎಂದು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments