ಚಿತೆ ಏರಿದ ಪತ್ನಿ! ಅಂತದ್ದೇನಾಯ್ತು?

Webdunia
ಶನಿವಾರ, 11 ಡಿಸೆಂಬರ್ 2021 (13:27 IST)
ಬೆಂಗಳೂರು :  ಜೀವನದಲ್ಲಿ ಜಿಗುಪ್ಸೆಗೊಂಡು ಸಾಫ್ಟ್‌ವೇರ್‌ ಮಹಿಳಾ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವೀರಣ್ಣಪಾಳ್ಯದ ನಿವಾಸಿ ಸಂಗೀತಾ (29) ಮೃತ ಯುವತಿ. ಮೃತಳ ಪತಿ ವಿನಯ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮನೆಯಲ್ಲಿ ಗುರುವಾರ ಸಂಜೆ ದಂಪತಿ ಮಧ್ಯೆ ಜಗಳವಾಗಿದೆ. ಆಗ ಬೇಸರಗೊಂಡ ಸಂಗೀತಾ, ತನ್ನ ಕೊಠಡಿಗೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲ ಹೊತ್ತಿನ ಬಳಿಕ ಆಕೆಯ ಕೋಣೆಗೆ ಪತಿ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದೂವರೆ ವರ್ಷದ ಹಿಂದೆ ಮಂಡ್ಯ ತಾಲೂಕಿನ ಸಂಗೀತಾ ಹಾಗೂ ನಾಗಮಂಗಲದ ವಿನಯ್ ಪ್ರೇಮ ವಿವಾಹವಾಗಿದ್ದು, ದಂಪತಿ ವೀರಣ್ಣಪಾಳ್ಯದಲ್ಲಿ ನೆಲೆಸಿದ್ದರು. ಸಾಫ್ಟ್ವೇರ್ ಕಂಪನಿಯಲ್ಲಿ ಸಂಗೀತಾ ಉದ್ಯೋಗದಲ್ಲಿದ್ದರೆ, ವಿನಯ್ ಸಿವಿಲ್ ಎಂಜಿನಿಯರ್ ಆಗಿದ್ದರು. ಇತ್ತೀಚೆಗೆ ಕೌಟುಂಬಿಕ ವಿಚಾರವಾಗಿ ಸತಿ-ಪತಿ ಮಧ್ಯೆ ಮನಸ್ತಾಪವಾಗಿದ್ದು, ಆಗಾಗ್ಗೆ ಜಗಳವಾಗುತ್ತಿತ್ತು. ಅಂತೆಯೇ ಗುರುವಾರ ಸಂಜೆ 6.30ರ ಸುಮಾರಿಗೆ ಸಂಗೀತಾ ಮತ್ತು ವಿನಯ್ ನಡುವೆ ಜಗಳವಾಗಿದೆ.

ತಮ್ಮ ಮಗಳ ಸಾವಿಗೆ ಅಳಿಯ ವಿನಯ್ ಕಾರಣವಾಗಿದ್ದಾನೆ ಎಂದು ಆರೋಪಿಸಿ ಅಮೃತಹಳ್ಳಿ ಠಾಣೆ ಪೊಲೀಸರಿಗೆ ಮೃತ ಸಂಗೀತಾ ಪೋಷಕರು ದೂರು ನೀಡಿದ್ದಾರೆ. ಅದರನ್ವಯ ಆತ್ಮಹತ್ಯೆಗೆ ಪ್ರಚೋದನೆ (ಐಪಿಸಿ 306) ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್ ಹತ್ಯೆ ಪ್ರಕರಣದ ಆರೋಪಿ ಸೋನಮ್ ರಘುವಂಶಿಗೆ ಸುಪ್ರೀಂ ಕೋರ್ಟ್‌ ಬಿಗ್‌ಶಾಕ್‌

ಆಸ್ತಿಗಾಗಿ ಇಂಥಾ ನೀಚ ಕೆಲಸ ಮಾಡೋದಾ... ಅತ್ತೆಯನ್ನು ದರ ದರ ಎಳೆದು ತಂದು ಖತರ್ನಾಕ್ ಕೆಲಸ ಮಾಡಿದ ಮಹಿಳೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಮುಂದಿನ ಸುದ್ದಿ
Show comments