Select Your Language

Notifications

webdunia
webdunia
webdunia
webdunia

ಜ.14ರಂದು ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವ, ಮಹಾರಥೋತ್ಸವ

ಜ.14ರಂದು ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವ, ಮಹಾರಥೋತ್ಸವ
ಹಾವೇರಿ , ಗುರುವಾರ, 10 ಜನವರಿ 2019 (15:41 IST)
ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವ ಮತ್ತು ಪ್ರಥಮ ಮಹಾರಥೋತ್ಸವವನ್ನು ಜ.14ರಂದು ಆಚರಣೆ ಮಾಡಲಾಗುತ್ತಿದೆ.

ಹಾವೇರಿ ಜಿಲ್ಲೆಯ ನರಸೀಪುರದಲ್ಲಿ ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವ ಮತ್ತು ಪ್ರಥಮ ಮಾಹಾರಥೋತ್ಸವವನ್ನು ಆಚರಿಸಲಾಗುತ್ತಿದೆ. ಇದೇ ತಿಂಗಳು 14 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜನಪದ ಕಲಾ‌ ಮಹೋತ್ಸವವನ್ನು ಆಯೋಜಿಸಲಾಗಿದೆ ಎಂದು ಅಂಬಿಗರ ಚೌಡಯ್ಯ ಗುರುಪೀಠದ ಜಗದ್ಗುರು ಶಾಂತಭೀಷ್ಮ ಚೌಡಯ್ಯ ಸ್ವಾಮಿಗಳು ತಿಳಿಸಿದರು. ಹಾವೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀಗಳು, ರಾಜ್ಯದಲ್ಲಿಯೇ ಪ್ರಥಮವಾಗಿ ಅಂಬಿಗರ ಚೌಡಯ್ಯನವರ ಮಹಾ ರಥೋತ್ಸವವನ್ನು ಆಚರಿಸಲಾಗುತ್ತಿದೆ.

 ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಲಿದ್ದಾರೆ. ಇನ್ನುಳಿದಂತೆ ಎಲ್ಲ ಅಂಬಿಗ ಸಮುದಾಯದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

 

 

Share this Story:

Follow Webdunia kannada

ಮುಂದಿನ ಸುದ್ದಿ

ಐಫೋನ್ ವಾಟ್ಸಪ್‌ನಲ್ಲಿ 3ಡಿ, ಟಚ್, ಚಿತ್ರಗಳಿಗೆ ಸ್ಟೀಕರ್‌ ಸೇರಿದಂತೆ ಮತ್ತಷ್ಟು ವೈಶಿಷ್ಟತೆಗಳು