Webdunia - Bharat's app for daily news and videos

Install App

ದಕ್ಷ ಸಿಐಡಿ ಡಿಐಜಿ ಸೋನಿಯಾ ನಾರಂಗ್ ವರ್ಗಾವಣೆ

Webdunia
ಶನಿವಾರ, 30 ಏಪ್ರಿಲ್ 2016 (15:43 IST)
ದ್ವಿತಿಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ತನಿಖೆ ನಡೆಸುತ್ತಿದ್ದ ಸಿಐಡಿ ಡಿಐಜಿ ಸೋನಿಯಾ ನಾರಂಗ್‌ರನ್ನು ಕೇಂದ್ರದ ರಾಷ್ಟ್ರೀಯ ತನಿಖಾ ದಳಕ್ಕೆ ಎತ್ತಂಗಡಿ ಮಾಡಲಾಗಿದೆ.
 
ದಕ್ಷ ಐಪಿಎಸ್ ಅಧಿಕಾರಿಯಾಗಿದ್ದ ನಾರಂಗ್, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಪ್ರಕರಣದ ತನಿಖೆ ಮುಕ್ತಾಯದ ಹಂತದಲ್ಲಿರುವಾಗಲೇ ಅವರನ್ನು ಕೇಂದ್ರಕ್ಕೆ ವರ್ಗಾಯಿಸಿರುವುದು ರಾಜ್ಯದ ಜನತೆಯಲ್ಲಿ ಅಸಮಾಧಾನ ಮೂಡಿಸಿದೆ.
 
ಹಗರಣದಲ್ಲಿ ಅಧಿಕಾರಿಗಳು ರಾಜಕಾರಣಿಗಳು ಶಾಮೀಲಾಗಿದ್ದಾರೆ ಎನ್ನುವ ವರದಿಗಳು ಕೇಳಿ ಬಂದಿದ್ದು, ಅವರ ವರ್ಗಾವಣೆಯ ಹಿಂದೆ ಪ್ರಭಾವಿ ಶಕ್ತಿಗಳ ಕೈವಾಡವಿರಬಹುದೇ ಎನ್ನುವ ಸಂದೇಹ ಎಲ್ಲರನ್ನು ಕಾಡುತ್ತಿದೆ.
 
ಸಿಐಡಿ ಇಲಾಖೆಯ ಮತ್ತೊಬ್ಬ ಹಿರಿಯ ಮಹಿಳಾ ಅಧಿಕಾರಿಯೊಬ್ಬರೊಂದಿಗಿನ ಜಟಾಪಟಿ ವರ್ಗಾವಣೆಗೆ ಕಾರಣವಾಗಿದೆಯೇ ಎನ್ನುವ ಅನುಮಾನವು ತಲೆ ಎತ್ತಿ ನಿಂತಿದೆ.
 
ಆದರೆ, ಸೋನಿಯಾ ನಾರಂಗ್‌ರನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಮುಕ್ತಾಯಗೊಂಡ ನಂತರ ಕೇಂದ್ರಕ್ಕೆ ಕಳುಹಿಸಲಾಗುವುದು ಅಥವಾ ಅದಕ್ಕಿಂತ ಮೊದಲೇ ವರ್ಗಾವಣೆಯಾಗುವುದೋ ಎನ್ನುವುದನ್ನು ಕಾದು ನೋಡಬೇಕಾಗಿದೆ.  

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments