Select Your Language

Notifications

webdunia
webdunia
webdunia
webdunia

ಚಲುವರಾಯಸ್ವಾಮಿಗೆ CID ಮಾಹಿತಿ ನೀಡುತ್ತಿದೆ

ಚಲುವರಾಯಸ್ವಾಮಿಗೆ CID ಮಾಹಿತಿ ನೀಡುತ್ತಿದೆ
bangalore , ಮಂಗಳವಾರ, 22 ಆಗಸ್ಟ್ 2023 (15:20 IST)
ಆರೋಪಿ ಸ್ಥಾನದಲ್ಲಿರುವ ಸಚಿವ ಚಲುವರಾಯಸ್ವಾಮಿಗೆ ಸಿಐಡಿ ಮಾಹಿತಿ ನೀಡುತ್ತಿದೆ ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸರ್ಕಾರದಲ್ಲಿ ವರ್ಗಾವಣೆ ದಂಧೆ ಹಾಗೂ ಸಚಿವರುಗಳಿಂದ ಅಧಿಕಾರಿಗಳ ಸುಲಿಗೆ ನಡೆಯುತ್ತಿದೆ ಎಂಬುದು ಸಾಬೀತಾಗಿದೆ ಎಂದು ಹೇಳಿದ್ದಾರೆ. ಕೃಷಿಸಚಿವ ಚಲುವಾರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರಿನ ಪತ್ರ ಬರೆದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ ವಶಕ್ಕೆ ಪಡೆದಿದೆ. ಈ ಮೂಲಕ ಸರ್ಕಾರದಲ್ಲಿ ವರ್ಗಾವಣೆ ದಂಧೆ & ಮಂತ್ರಿಗಳಿಂದ ಅಧಿಕಾರಿಗಳ ಸುಲಿಗೆ ನಡೀತಿದೆ ಎಂಬುದು ಸಾಬೀತಾಗಿದೆ. ಪತ್ರ ನಕಲಿಯೋ ಅಸಲಿಯೋ ಆ ಮಾತು ಹಾಗಿರಲಿ. ಆದರೆ, ಕೃಷಿ ಇಲಾಖೆಯಲ್ಲಿ ಸುಲಿಗೆ ವರ್ಗಾವಣೆ ದಂಧೆ ನಡೆಯುತ್ತಿರುವುದು ಅಸಲಿ ಎನ್ನುವುದು ಗೊತ್ತಾಯಿತಲ್ಲ ಎಂದ್ರು. ಕೃಷಿ ಸಚಿವ ಚಲುವಾರಾಯಸ್ವಾಮಿ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

BBMP ಎಲ್ಲಾ ರೀತಿಯ ಚಿಕಿತ್ಸೆಗೂ ಸಿದ್ದವಿದೆ