Webdunia - Bharat's app for daily news and videos

Install App

ಅಲ್ಲೂ ಪೆನ್ ಡ್ರೈವ್, ಇಲ್ಲೂ ಪೆನ್ ಡ್ರೈವ್: ವಾಲ್ಮೀಕಿ ನಿಗಮ ಅಧೀಕ್ಷಕ ಚಂದ್ರಶೇಖರ್ ಕೇಸ್ ನಲ್ಲೂ ಪೆನ್ ಡ್ರೈವ್

Krishnaveni K
ಬುಧವಾರ, 29 ಮೇ 2024 (10:26 IST)
Photo Credit: X
ಬೆಂಗಳೂರು: ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಪೆನ್ ಡ್ರೈವ್ ವಿಚಾರ ಈಗ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಪ್ರಕರಣದಲ್ಲೂ ಸದ್ದು ಮಾಡುತ್ತಿದೆ.

ಅವ್ಯವಹಾರ ಮತ್ತು ರಾಜಕೀಯ ಒತ್ತಡಗಳಿಂದಾಗಿ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಪ್ರಕರಣ ರಾಜಕೀಯವಾಗಿ ಭಾರೀ ಬಿರುಗಾಳಿ ಎಬ್ಬಿಸಿದೆ. ಈ ವಿಚಾರದಲ್ಲಿ ಸಚಿವ ನಾಗೇಂದ್ರ ಕೈವಾಡವೂ ಇದೆ ಎಂದು ಆರೋಪ ಕೇಳಿಬಂದಿದೆ.

ಈ ನಡುವೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಚಂದ್ರಶೇಖರ್ ಮನೆಯಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಪದ್ಮನಾಭ್ ಎಂದು ಹೆಸರು ಬರೆದಿದ್ದ ಪೆನ್ ಡ್ರೈವ್ ಸಿಕ್ಕಿದೆ. ಈ ಪೆನ್ ಡ್ರೈವ್ ನಲ್ಲಿ ಅವ್ಯವಹಾರದ ಮಾಹಿತಿಯಿರಬಹುದು ಎನ್ನಲಾಗಿದೆ. ಆದರೆ ನಿಜವಾಗಿ ಈ ಪೆನ್ ಡ್ರೈವ್ ನಲ್ಲಿ ಏನಿದೆ ಎನ್ನುವುದು ಗುಟ್ಟಾಗಿಯೇ ಇದೆ. ಪೆನ್ ಡ್ರೈವ್ ನಲ್ಲಿ ಏನಿದೆ ಎಂಬುದು ನಮಗೂ ಗೊತ್ತಾಗಬೇಕು ಎಂದು ಚಂದ್ರಶೇಖರ್ ಪತ್ನಿ ಆಗ್ರಹಿಸಿದ್ದಾರೆ. ಈ ಮೂಲಕ ಪ್ರಜ್ವಲ್ ಪ್ರಕರಣದಲ್ಲಿ ಕೇಳಿಬಂದಿದ್ದ ಪೆನ್ ಡ್ರೈವ್ ವಿಚಾರ ಈ ಪ್ರಕರಣದಲ್ಲೂ ಭಾರೀ ಕೋಲಾಹಲವನ್ನೆಬ್ಬಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments