Webdunia - Bharat's app for daily news and videos

Install App

ಶಿವಪಾರ್ವತಿ ಬಾಯಲ್ಲಿ ಸಿಗರೇಟ್ ..!

Webdunia
ಗುರುವಾರ, 7 ಜುಲೈ 2022 (20:58 IST)
ಸಾಕ್ಷ್ಯಚಿತ್ರವೊಂದರಲ್ಲಿ ಹಿಂದುಗಳು ಆರಾಧಿಸುವ ಕಾಳಿ ಮಾತೆಯ ಬಾಯಲ್ಲಿ ಸಿಗರೇಟ್​ ಇಟ್ಟು ಅವಮಾನಿಸಿದ್ದ ನಿರ್ದೇಶಕಿ ಲೀನಾ ಮಣಿಮೇಕಲೈ, ಇದೀಗ ಮತ್ತೊಂದು ವಿವಾದಾತ್ಮಕ ಪೋಸ್ಟ್ ಮಾಡಿದ್ದಾರೆ. ಶಿವ-ಪಾರ್ವತಿ ವೇಷಧಾರಿಗಳ ಬಾಯಲ್ಲಿ ಸಿಗರೇಟ್ ಇರುವ ಫೋಟೋವನ್ನು ಟ್ವಿಟರ್​ ಖಾತೆಯಲ್ಲಿ ಅಪ್​ಲೋಡ್​ ಮಾಡಿಕೊಂಡಿದ್ದಾಳೆ.ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದು, ಎಲ್ಲೆಡೆ ಈಕೆಯ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.
 
ಲೀನಾ ಮೈಣಿಮೇಕಲೈ ನಿರ್ದೇಶನದ 'ಕಾಳಿ' ಡಾಕ್ಯುಮೆಂಟರಿ ಸಿನಿಮಾದ ಪೋಸ್ಟರ್​ನಲ್ಲಿ ಕಾಳಿದೇವಿಯ ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ LGBTQ(ಗೇ, ಟ್ರಾನ್ಸ್ ಜೆಂಡರ್ ಸಮುದಾಯದ್ದು) ಧ್ವಜ ಹಿಡಿದಿರುವ, ಬಾಯಲ್ಲಿ ಸಿಗರೇಟ್​ ಇತ್ತು. ಜುಲೈ 4ರಂದು ಕೆನಾಡದ ಫಿಲ್ಮ್ ಪೆಸ್ಟಿವಲ್​ನಲ್ಲಿ ಕಾಳಿ ಮಾತೆ ಸಿಗರೇಟ್ ಸೇದುವ ಪೋಸ್ಟರ್ ವೈರಲ್​ ಆಗಿದ್ದು, ವಿವಾದಾತ್ಮಕ ಪೋಸ್ಟ್ ನೋಡಿ ಹಿಂದೂ ಸಂಘಟನೆಗಳು ರೊಚ್ಚಿಗೆದ್ದು ಆಕೆ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಹಿಂದುಗಳ ಬಳಿ ಕ್ಷಮೆಯಾಚಿಸುವಂತೆ ಪಟ್ಟು ಹಿಡಿದಿದ್ದಾರೆ. ಪೋಸ್ಟರ್​ ವಿರುದ್ಧ ಆಕ್ರೋಶ ಭುಗಿಲೇಳುತ್ತಿದ್ದಂತೆ ಟ್ವಿಟರ್​ ಸಂಸ್ಥೆಯು ಲೀನಾಳ ಖಾತೆಯಿಂದ ವಿವಾದಾತ್ಮಕ ಕಾಳಿಮಾತೆ ಫೋಸ್ಟರ್​ ಫೋಟೋವನ್ನು ನಿನ್ನೆಯಷ್ಟೇ ಡಿಲೀಟ್​ ಮಾಡಿತ್ತು. ಇಷ್ಟಕ್ಕೆ ಸುಮ್ಮನಾಗದ ಲೀನಾ, ಇಂದು ಶಿವ-ಪಾರ್ವತಿ ವೇಷಧಾರಿಗಳ ಬಾಯಲ್ಲಿ ಸಿಗರೇಟ್​ ಇರುವ ಫೋಟೋವನ್ನು ಟ್ವಿಟರ್​ನಲ್ಲಿ ಹಾಕಿ ಹಿಂದುಗಳ ಕಣ್ಣು ಕೆಂಪಾಗಿಸಿದ್ದಾಳೆ.
 
ಹಿಂದುಗಳನ್ನೇ ಗುರಿಯಾಗಿಸಿಕೊಂಡು ಲೀನಾ ಮೈಣಿಮೇಕಲೈ, ಹಿಂದು ದೇವರ ಬಗ್ಗೆ ಅಪಮಾನಕಾರಿಯಾಗಿ ಫೋಟೋಗಳನ್ನು ಹಾಕಿ ದೇಶದಲ್ಲಿ ಶಾಂತಿ ಕದಡುತ್ತಿದ್ದಾರೆ. ಬೇಕಂತಂಲೇ ದುರುದ್ದೇಶದಿಂದ ಮಾಡುತ್ತಿದ್ದಾಳೆ. ಹುಚ್ಚಿ ಇರಬೇಕು, ಮಾನಸಿಕ ಸ್ಥಿಮಿತತೆ ಇಲ್ಲ ಅನ್ನಿಸುತ್ತೆ. ಮೊದಲು ಮನೋವೈದ್ಯರ ಬಳಿ ಚಿಕಿತ್ಸೆಗೆ ವ್ಯವಸ್ಥೆ ಆಗಬೇಕು. ಬಿಟ್ಟಿ ಪ್ರಚಾರಕ್ಕಾಗಿ ಹಿಂದು ದೇವರ ಬಗ್ಗೆ ಲೀನಾ ಅವಹೇಳನಕಾರಿ ಪೋಸ್ಟ್​ ಮಾಡುತ್ತಿದ್ದಾಳೆ. ಅವಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ದೇಶಾದ್ಯಂತ ಆಗ್ರಹ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments