ಸಿನೆಮಾ ಮನರಂಜನೆ ಮಾತ್ರವಲ್ಲ ...!!!! ಸಾಮಾಜಿಕ ಜವಾಬ್ದಾರಿಯೂ ಕೂಡ ಇದೆ ..!!

Webdunia
ಮಂಗಳವಾರ, 13 ಸೆಪ್ಟಂಬರ್ 2022 (14:02 IST)
ಚಲನಚಿತ್ರ ಎನ್ನುವುದು ಕಥೆ, ಚಿತ್ರಕಥೆ, ಸಂಭಾಷಣೆ, ಹಾಡುಗಳು, ಹಿನ್ನೆಲೆ ಸಂಗೀತ, ಸಿನಿಮಾಟೋಗ್ರಫಿ, ಸಂಕಲನ ಹೀಗೆ ಹತ್ತಾರು ತಂತ್ರಜ್ಞರು ಸಮೀಕರಣಗೊಂಡು ಸಿದ್ಧವಾಗುವ ಮಾಧ್ಯಮ. ಇವರಲ್ಲಿ ಯಾರಾದರೊಬ್ಬರು ತಮ್ಮ ಕಾರ್ಯದಲ್ಲಿ ಸೋತರೂ ಇಡೀ ಸಿನಿಮಾ ಸೋಲುತ್ತದೆ' ಎಂದು ವಾರ್ತಾ ಇಲಾಖೆ ಉಪನಿರ್ದೇಶಕ ಮಂಜುನಾಥ ಡೊಳ್ಳಿನ ಅಭಿಪ್ರಾಯಪಟ್ಟರು.
 
ನಿವೃತ್ತ ಶಿಕ್ಷಕ ಭಾಗ್ಯನಗರದ ಡಿ.ಎಂ.ಬಡಿಗೇರ ಅವರ 'ಅವ್ವ' ನಿವಾಸದಲ್ಲಿ ಶನಿವಾರ ಆಯೋಜಿಸಿದ್ದ 37ನೇ ವಿಚಾರಮಂಥನ ಕೂಟದಲ್ಲಿ ಮಾತನಾಡಿದ ಅವರು 'ಭಿನ್ನ ಕಾರಣಗಳಿಗಾಗಿ ಸಿನಿಮಾ ನೋಡುವ ಪ್ರೇಕ್ಷಕ ವರ್ಗವಿದೆ‌. ಸಿನಿಮಾ ಮುಖ್ಯವಾಗಿ ಮನರಂಜನೆ ಮಾಧ್ಯಮ. ಜೊತೆಗೆ ಅದಕ್ಕೆ ತನ್ನದೇ ಆದ ಸಾಮಾಜಿಕ ಜವಾಬ್ದಾರಿಯೂ ಇದೆ' ಎಂದರು.
 
'ಮಿನುಗುತ್ತಿರುವ ಕನ್ನಡ ಚಿತ್ರರಂಗ; ಪ್ರೇಕ್ಷಕ ಬಾರದೇ ಕರಗುತ್ತಿರುವ ಚಿತ್ರಮಂದಿರ' ಎಂಬ ವಿಷಯ ಕುರಿತು ಉಪನ್ಯಾಸ ನೀಡಿದ ಪತ್ರಕರ್ತ ಬಸವರಾಜ ಕರುಗಲ್ 'ಸದಭಿರುಚಿಯ ಕನ್ನಡ ಚಲನಚಿತ್ರಗಳಿಗೆ ಪ್ರೇಕ್ಷಕರು ಪ್ರೋತ್ಸಾಹಿಸಬೇಕು. ಸಿನಿಮಾ ಮಂದಿರಗಳಲ್ಲಿ ಸಮೂಹದೊಂದಿಗೆ ಚಲನಚಿತ್ರ ಆಸ್ವಾದಿಸುವ ಅನುಭವ, ವೈಯಕ್ತಿಕವಾಗಿ ಆನ್‌ಲೈನ್ ವೇದಿಕೆಗಳಲ್ಲಿ ದಕ್ಕುವುದಿಲ್ಲ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments