Webdunia - Bharat's app for daily news and videos

Install App

ನಗರಗಳಿರುವುದು ಸುಗಮ ಜೀವನಕ್ಕಾಗಿ, ವಾಹನಗಳ ಭರಾಟೆಗಲ್ಲ

Webdunia
ಶುಕ್ರವಾರ, 15 ಸೆಪ್ಟಂಬರ್ 2017 (20:45 IST)
ನಗರಗಳಿರುವುದು ಜನರ ಸುಗಮ ಜೀವನಕ್ಕಾಗಿಯೇ ಹೊರತು ವಾಹನಗಳ ಭರಾಟೆಗಲ್ಲ. ನಗರಗಳ ಸುಸ್ಥಿರತೆಗೆ ನೇಸರ್ಗಿಕ ಸಂಪನ್ಮೂಲಗಳ ಅಸಮರ್ಪಕ ಬಳಕೆ ನಿಲ್ಲಿಸಬೇಕು ಎಂದು ಅಮೆರಿಕದ ರೋಡ್‌ ಐಲ್ಯಾಂಡ್‌ನ ಪ್ರಾವಿಡೆನ್ಸ್‌ ನಗರದ ಸುಸ್ಥಿರತೆ ವಿಭಾಗದ ನಿರ್ದೇಶಕರಾಗಿರುವ  ಲೆ ಬ್ಯಾಂಬರ್ಗರ್‌  ಅಭಿಪ್ರಾಯಪಟ್ಟಿದ್ದಾರೆ. 

ನಗರದಲ್ಲಿ ಗುರುವಾರ ಚೆನ್ನೈನ ಮೆರಿಕ ರಾಯಭಾರ ಕಚೇರಿ ಮತ್ತು ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ ಏರ್ಪಡಿಸಿದ್ದ ನಗರ, ರಾಜಕಾರಣ ಮತ್ತು ಸುಸ್ಥಿರತೆ ವಿಷಯದ ಸಂವಾದದಲ್ಲಿ ಬಗ್ಗೆ ವಿದ್ಯಾರ್ಥಿಗಳು, ವಿಜ್ಞಾನಿಗಳು ಮತ್ತು ಸಮಾಜದ ಪ್ರಮುಖರನ್ನ ಉದ್ದೇಶಿಸಿ ಉಪನ್ಯಾಸ ನೀಡಿದರು.

ಸುಸ್ಥಿರ ನಗರ ಯೋಜಿಸುವಲ್ಲಿ ಸಂರಕ್ಷಣಾ ವಿಜ್ಞಾನ ಮತ್ತು ನಿರ್ವಹಣೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಜ್ಞಾನ ವಿನಿಮಯ ಸಂವಾದ ಕಾರ್ಯಕ್ರಮದಲ್ಲಿ ಸ್ಥಳೀಯ ಎನ್‌ಜಿಒ ಮುಖಂಡರೊಂದಿಗೆ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ’ಗ್ರೀನೊವೇಟ್‌’ ರಾಯಭಾರಿಗಳನ್ನ ಭೇಟಿಯಾದರು. ಹವಾಮಾನ ಬದಲಾವಣೆಯನ್ನು ತಡೆಯುವಲ್ಲಿ ಉದ್ಯಮಗಳ ಪಾತ್ರದ ಕುರಿತು ಪರಿಸರ ಸ್ನೇಹಿ ಉದ್ಯಮಗಳ ಸಿಇಒ ಮತ್ತು ಸಿಒಒಗಳೊಂದಿಗೆ ಮಾತುಕತೆ ನಡೆಸಿದರು. ವಿಜ್ಞಾನಿಗಳು, ಸಂಶೋಧಕರು ಮತ್ತು ಚಿಂತಕರೊಂದಿಗೆ ಸುಸ್ಥಿರ ನಗರಗಳ ಬಗ್ಗೆ ಚರ್ಚೆ ನಡೆಸಿದರು.

ಸದ್ಯ ಲೆ ಬ್ಯಾಂಬರ್ಗರ್‌, ಅಮೆರಿಕದ ರೋಡ್‌ ಐಲ್ಯಾಂಡ್‌ನ ಪ್ರಾವಿಡೆನ್ಸ್‌ ನಗರದ  ಸಸ್ಟೈನಬಲಿಟಿ ವಿಭಾಗದ ನಿರ್ದೇಶಕರಾಗಿ ದುಡಿಯುತ್ತಿದ್ದಾರೆ. ತ್ಯಾಜ್ಯವನ್ನು ಮಿತಿಗೊಳಿಸುವುದು, ಮಾಲಿನ್ಯದ ತಡೆ, ಕಾರ್ಯಕ್ಷಮತೆ ಹೆಚ್ಚಳಕ್ಕೆ ಪ್ರೋತ್ಸಾಹ ಮತ್ತು ಸ್ಥಳೀಯ ಸಂಪನ್ಮೂಲಗಳ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಸುಸ್ಥಿರ ನಗರದ ವಿಷಯವಾಗಿ ಬೋಸ್ಟನ್ ನಗರವನ್ನ ಪ್ರಸ್ತಾಪಿಸಿದ ವರು ನಾವಿಡುವ ಪ್ರತಿಯೊಂದು ಹೆಜ್ಜೆ ದೊಡ್ಡ ಪ್ರತ ಫಲ ಕೊಡುತ್ತದೆ. ಬೋಸ್ಟನ್ ನಗರದಲ್ಲಿರುವ ಗಲವಾದ ಪಾದಚಾರಿ ಮಾರ್ಗ, ಪ್ರತ್ಯೇಕ ಸೈಕಲ್ ಸಂಚಾರ ಮಾರ್ಗ, ನೀರಿನ ಪುನರ್ಬಳಕೆ ಪ್ರಸ್ತಾಪಿಸಿದರು. ಮಾಲಿನ್ಯದ ಅರಿವಿರುವ ಅಲ್ಲಿನ ಜನ ಸ್ವಪ್ರೇರಣೆಯಿಂದ ಇಂಧನ, ವಿದ್ಯುತ್ ಮಿತ ಬಳಕೆ, ಮಾಲಿನ್ಯ ನಿಯಂತ್ರಣದ ಮೂಲಕ ನಗರದ ಸುಸ್ಥಿರತೆಗೆ ಕಟಿಬದ್ಧರಾಗಿದ್ದಾರೆಂದು ತಿಳಿಸಿದರು.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments