Webdunia - Bharat's app for daily news and videos

Install App

ಭಿನ್ನಮತ ತಾರಕಕ್ಕೇರುತ್ತಿದ್ದ ಹಾಗೇ ರಾಷ್ಟ್ರ ನಿಷ್ಠೆ - ಪಕ್ಷ ನಿಷ್ಠೆ ಅತ್ಯಂತ ಶ್ರೇಷ್ಠ ಎಂದ ಸಿಟಿ ರವಿ

Sampriya
ಭಾನುವಾರ, 1 ಡಿಸೆಂಬರ್ 2024 (15:35 IST)
Photo Courtesy X
ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿ ಭಿನ್ನಮತ ತಾರಕಕ್ಕೇರುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕ ಸಿಟಿ ರವಿ ಪೋಸ್ಟ್‌ ಹಾಕಿ,  ರಾಷ್ಟ್ರ ನಿಷ್ಠೆ - ಪಕ್ಷ ನಿಷ್ಠೆ ಅತ್ಯಂತ ಶ್ರೇಷ್ಠವಾದದ್ದು ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು ದಿವಂಗತ ಅನಂತ್ ಕುಮಾರ್ ಅವರ ಮಾತುಗಳನ್ನು ಸ್ಮರಿಸಿದ್ದಾರೆ.

ನಿಷ್ಠೆ ಎಂಬುದು ಸನ್ನಿವೇಶದ ಅವಶ್ಯಕತೆ ಅಲ್ಲ, ಜೀವನದ ಜೀವಾಳ. ರಾಷ್ಟ್ರ ನಿಷ್ಠೆ - ಪಕ್ಷ ನಿಷ್ಠೆ ಅತ್ಯಂತ ಶ್ರೇಷ್ಠವಾದದ್ದು.
ಇವತ್ತಿನ ಬಿಜೆಪಿಯ ಕೆಲವರ ಹೇಳಿಕೆ-ಪ್ರತಿಹೇಳಿಕೆ (ನಿಷ್ಠಾವಂತರ?) ಕೇಳುತ್ತಾ ಹಿರಿಯರಾದ ದಿವಂಗತ ಅನಂತ್  ಕುಮಾರ್ ಅವರು ಹೇಳುತ್ತಿದ್ದ  ಮೇಲಿನ ಮಾತು ನೆನಪಾಯಿತು ಎಂದು ಬರೆದುಕೊಂಡಿದ್ದಾರೆ.


ಬಸನಗೌಡ ಪಾಟೀಲ ಯತ್ನಾಳ ಅವರು ವಿಜಯೇಂದ್ರ ಕಾಂಗ್ರೆಸ್‌ ಜೊತೆ ಒಳಒಪ್ಪಂದ ಮಾಡಿಕೊಂಡಿದ್ದರು ಎಂದು ಗಂಭೀರ ಆರೋಪ ಮಾಡಿದ್ದರು. ಕಾಂಗ್ರೆಸ್‌ನೊಂದಿಗೆ ನಾನು ಒಳಒಪ್ಪಂದ ಮಾಡಿಕೊಂಡಿದ್ದಕ್ಕೆ ದಾಖಲೆಗಳಿದ್ದರೆ ತಕ್ಷಣವೇ ಅವುಗಳನ್ನು ಬಿಡುಗಡೆ ಮಾಡಿ ಎಂದು ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸವಾಲು ಹಾಕಿದರು.

ಯತ್ನಾಳ ಜೊತೆ ರಮೇಶ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಅರವಿಂದ್ ಲಿಂಬಾವಳಿ, ಬಿ.ಪಿ ಹರೀಶ್, ಪ್ರತಾಪ್ ಸಿಂಹ ಅವರು ಸೇರಿಕೊಂಡಿದ್ದಾರೆ.

ವಿಜಯೇಂದ್ರ ಬಣದಲ್ಲಿ ಬಿ.ಸಿ.ಪಾಟೀಲ, ಎಂ.ಪಿ.ರೇಣುಕಚಾರ್ಯ ಸೇರಿ ಮುಂತಾದವರು ಇದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments