Webdunia - Bharat's app for daily news and videos

Install App

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ, ಹೊಸ ಬಾಂಬ್ ಸಿಡಿಸಿದ ಪ್ರದೀಪ್ ಈಶ್ವರ್‌

Sampriya
ಶನಿವಾರ, 31 ಜನವರಿ 2026 (16:07 IST)
Photo Credit X
ಕನಕಪುರ: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರು ಆತ್ಮಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಹೊಸ ಬಾಂಬ್ ಸಿಡಿಸಿದ್ದು, ಇದು ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. 

ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರದಲ್ಲಿ ಇಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಸಿಜೆ ರಾಯ್ ಅವರೇ ಶೂಟ್ ಮಾಡಿಕೊಂಡ್ರಾ ಅಥವಾ ಬೇರೆ ಯಾರಾದರೂ ಶೂಟ್ ಮಾಡಿಕೊಂಡರಾ ಎಂಬ ಅನುಮಾನವಿದೆ ಎಂಬ ಪ್ರದೀಪ್ ಈಶ್ವರ್ ಹೇಳಿಕೆ ಭಾರೀ ಕುತೂಹಲವನ್ನು ಮೂಡಿಸಿದೆ. 

ಶೂಟೌಟ್ ಸಂಬಂಧ ಐಟಿ ಅಧಿಕಾರಿಗಳ ಮೇಲೆ ಬೊಟ್ಟು ಮಾಡಿದರು. ಶೂಟೌಟ್ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಬಿಟ್ಟರೆ ಆ ಸ್ಥಳದಲ್ಲಿ ಬೇರೆ ಯಾರು ಇರಲಿಲ್ಲ. ಇನ್ನೂ ಸಿಸಿಟಿವಿ  ಕ್ಯಾಮರಾಗಳಲ್ಲೂ ಈ ದೃಶ್ಯ ಸೆರೆಯಾಗಿಲ್ಲ ಎಂದು ಹೇಳಿದರು.

ಕೇರಳ ಚುನಾವಣೆಗೆ ಬಿಜೆಪಿಯವರು ಸಿಜೆ ರಾಯ್ ಅವರಿಂದ ನೂರಾರು ಕೋಟಿ ಹಣವನ್ನು ಕೇಳಿದ್ರು, ಈ ವಿಚಾರದಲ್ಲೇ ಟಾರ್ಗೆಟ್ ಮಾಡಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತನಿಖೆಗೆ ಒಳಪಡಿಸಿದ್ದಾರೆ. ಈ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಪ್ರದೀಪ್ ಈಶ್ವರ್ ಒತ್ತಾಯಿಸಿದರು.

ಸಿಬಿಐ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಅದು ಬಿಜೆಪಿ ಕೈಯಲಿದೆ ಎಂದು ಪ್ರದೀಪ್ ಈಶ್ವರ್ ಆರೋಪಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments