ಮಸೀದಿ ಮುಂದೆ ಗಣೇಶ ಮೆರವಣಿಗೆ ಮೇಲೆ ದಾಳಿ: ನಾಗಮಂಗಲದಲ್ಲಿ ಸೆಕ್ಷನ್ 144 ಜಾರಿ

Krishnaveni K
ಗುರುವಾರ, 12 ಸೆಪ್ಟಂಬರ್ 2024 (10:07 IST)
ಮಂಡ್ಯ: ಗಣೇಶ ಮೂರ್ತಿ ವಿಸರ್ಜನೆಗೆ ಮುನ್ನ ಮಂಡ್ಯದ ನಾಗಮಂಗಲದಲ್ಲಿ ನಡೆಯುತ್ತಿದ್ದ ಮೆರವಣಿಗೆ ಮೇಲೆ ಅನ್ಯ ಕೋಮಿನ ಯುವಕರಿಂದ ದಾಳಿಯಾಗಿದ್ದು ಸೆಕ್ಷನ್144 ಜಾರಿ ಮಾಡಲಾಗಿದೆ.

ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಲ್ಲಿ ಕಳೆದ 5 ದಿನಗಳಿಂದ ಗಣೇಶನ ಮೂರ್ತಿ ಇಡಲಾಗಿತ್ತು. ನಿನ್ನೆ ಮೆರವಣಿಗೆ ಮೂಲಕ ವಿಸರ್ಜನೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಪಟಾಕಿ ಸಿಡಿಸಿ, ತಮಟೆ, ಡಿಜೆ ಸೌಂಡ್ ನೊಂದಿಗೆ ಹಿಂದೂಗಳು ಗಣೇಶ ವಿಸರ್ಜನೆಗೆ ಅದ್ಧೂರಿ ಮೆರವಣಿಗೆ ಸಾಗುತ್ತಿತ್ತು.

ಮಂಡ್ಯ ಸರ್ಕಲ್ ಮಾರ್ಗವಾಗಿ ಯಾ ಅಲ್ಲಾ ಮಸೀದಿ ಮತ್ತು ದರ್ಗಾ ರಸ್ತೆಯ ಮುಂಭಾಗ ಸಾಗುತ್ತಿದ್ದಾಗ ಅನ್ಯ ಕೋಮಿನ ಯುವಕರು ದಾಳಿ ನಡೆಸಿದ್ದಾರೆ. ಮಸೀದಿ ಮುಂದೆ ಡೊಳ್ಳು,ತಮಟೆ ಬಾರಿಸದಂತೆ ಕ್ಯಾತೆ ತೆಗೆದಿದ್ದಾರೆ. ಆದರೆ ಅವರನ್ನು ಕ್ಯಾರೇ ಮಾಡದೇ ಗಣೇಶನ ಮೆರವಣಿಗೆ ಯಥಾವತ್ತು ಮುಂದೆ ಸಾಗಿದೆ.

ಮಸೀದಿಯಿಂದ ಸ್ವಲ್ಪ ದೂರ ಗಣೇಶನ ಮೆರವಣಿಗೆ ಬರುತ್ತಿದ್ದಂತೇ ಕಟ್ಟಡದ ಮೇಲೆ ನಿಂತು ಕಲ್ಲು ತೂರಾಟ ನಡೆಸಿ ಅನ್ಯಕೋಮಿನ ಯುವಕರು ದಾಳಿ ನಡೆಸಿದ್ದಾರೆ. ಈ ವೇಳೆ ಎರಡೂ ಗುಂಪಿನ ನಡುವೆ ಜೋರಾಗಿ ಹಲ್ಲೆ, ವಾಗ್ವಾದ ನಡೆದಿದೆ. ಕೆಲವು ಸಮಯದ ನಂತರ ಮಂಡ್ಯ ಸರ್ಕಲ್ ನಲ್ಲಿ ಅನ್ಯ ಕೋಮಿನ ಯುವಕರು ಸಿಕ್ಕ ಸಿಕ್ಕ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿ, ಪೆಟ್ರೋಲ್ ಬಾಂಬ್ ಹಾಕಿ ದಾಳಿ ಮಾಡಿದ್ದಾರೆ. ಅಲ್ಲದೆ ಮಾರಕಾಸ್ತ್ರ ಹಿಡಿದು ಸಿಕ್ಕ ಸಿಕ್ಕವರ ಮೇಲೆ ದಾಳಿಗೆ ಮುಂದಾಗಿದ್ದಾರೆ. ಇದೀಗ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments