Webdunia - Bharat's app for daily news and videos

Install App

ಮಸೀದಿ ಮುಂದೆ ಗಣೇಶ ಮೆರವಣಿಗೆ ಮೇಲೆ ದಾಳಿ: ನಾಗಮಂಗಲದಲ್ಲಿ ಸೆಕ್ಷನ್ 144 ಜಾರಿ

Krishnaveni K
ಗುರುವಾರ, 12 ಸೆಪ್ಟಂಬರ್ 2024 (10:07 IST)
ಮಂಡ್ಯ: ಗಣೇಶ ಮೂರ್ತಿ ವಿಸರ್ಜನೆಗೆ ಮುನ್ನ ಮಂಡ್ಯದ ನಾಗಮಂಗಲದಲ್ಲಿ ನಡೆಯುತ್ತಿದ್ದ ಮೆರವಣಿಗೆ ಮೇಲೆ ಅನ್ಯ ಕೋಮಿನ ಯುವಕರಿಂದ ದಾಳಿಯಾಗಿದ್ದು ಸೆಕ್ಷನ್144 ಜಾರಿ ಮಾಡಲಾಗಿದೆ.

ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಲ್ಲಿ ಕಳೆದ 5 ದಿನಗಳಿಂದ ಗಣೇಶನ ಮೂರ್ತಿ ಇಡಲಾಗಿತ್ತು. ನಿನ್ನೆ ಮೆರವಣಿಗೆ ಮೂಲಕ ವಿಸರ್ಜನೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಪಟಾಕಿ ಸಿಡಿಸಿ, ತಮಟೆ, ಡಿಜೆ ಸೌಂಡ್ ನೊಂದಿಗೆ ಹಿಂದೂಗಳು ಗಣೇಶ ವಿಸರ್ಜನೆಗೆ ಅದ್ಧೂರಿ ಮೆರವಣಿಗೆ ಸಾಗುತ್ತಿತ್ತು.

ಮಂಡ್ಯ ಸರ್ಕಲ್ ಮಾರ್ಗವಾಗಿ ಯಾ ಅಲ್ಲಾ ಮಸೀದಿ ಮತ್ತು ದರ್ಗಾ ರಸ್ತೆಯ ಮುಂಭಾಗ ಸಾಗುತ್ತಿದ್ದಾಗ ಅನ್ಯ ಕೋಮಿನ ಯುವಕರು ದಾಳಿ ನಡೆಸಿದ್ದಾರೆ. ಮಸೀದಿ ಮುಂದೆ ಡೊಳ್ಳು,ತಮಟೆ ಬಾರಿಸದಂತೆ ಕ್ಯಾತೆ ತೆಗೆದಿದ್ದಾರೆ. ಆದರೆ ಅವರನ್ನು ಕ್ಯಾರೇ ಮಾಡದೇ ಗಣೇಶನ ಮೆರವಣಿಗೆ ಯಥಾವತ್ತು ಮುಂದೆ ಸಾಗಿದೆ.

ಮಸೀದಿಯಿಂದ ಸ್ವಲ್ಪ ದೂರ ಗಣೇಶನ ಮೆರವಣಿಗೆ ಬರುತ್ತಿದ್ದಂತೇ ಕಟ್ಟಡದ ಮೇಲೆ ನಿಂತು ಕಲ್ಲು ತೂರಾಟ ನಡೆಸಿ ಅನ್ಯಕೋಮಿನ ಯುವಕರು ದಾಳಿ ನಡೆಸಿದ್ದಾರೆ. ಈ ವೇಳೆ ಎರಡೂ ಗುಂಪಿನ ನಡುವೆ ಜೋರಾಗಿ ಹಲ್ಲೆ, ವಾಗ್ವಾದ ನಡೆದಿದೆ. ಕೆಲವು ಸಮಯದ ನಂತರ ಮಂಡ್ಯ ಸರ್ಕಲ್ ನಲ್ಲಿ ಅನ್ಯ ಕೋಮಿನ ಯುವಕರು ಸಿಕ್ಕ ಸಿಕ್ಕ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿ, ಪೆಟ್ರೋಲ್ ಬಾಂಬ್ ಹಾಕಿ ದಾಳಿ ಮಾಡಿದ್ದಾರೆ. ಅಲ್ಲದೆ ಮಾರಕಾಸ್ತ್ರ ಹಿಡಿದು ಸಿಕ್ಕ ಸಿಕ್ಕವರ ಮೇಲೆ ದಾಳಿಗೆ ಮುಂದಾಗಿದ್ದಾರೆ. ಇದೀಗ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments