Select Your Language

Notifications

webdunia
webdunia
webdunia
webdunia

ಮಂಗಳೂರು ಮಹಾನಗರ ಪಾಲಿಕೆಯ ಟಿಕೆಟ್ ಗಾಗಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಮಂಗಳೂರು ಮಹಾನಗರ ಪಾಲಿಕೆಯ ಟಿಕೆಟ್ ಗಾಗಿ  ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಮಂಗಳೂರು , ಗುರುವಾರ, 31 ಅಕ್ಟೋಬರ್ 2019 (08:41 IST)
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.




ನವೆಂಬರ 12ರಂದು ನಡೆಯಲಿರುವ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮಾಜಿ ಮೇಯರ್ ಗುಲ್ಜಾರ್ ಬಾನುಗೆ ಟಕೆಟ್ ಕೊಡಿಸುವುದಾಗಿ ಮಾಜಿ ಶಾಸಕ ಮೊಯಿದ್ದೀನ್ ಬಾವ ಭರವಸೆ ನೀಡಿದ್ದರು. ಆದರೆ  ಚುನಾವಣೆ ಹಿನ್ನಲೆಯಲ್ಲಿ ಬುಧವಾರ ರಾತ್ರಿ ಖಾಸಗಿ ಹೋಟೆಲ್ ವೊಂದರಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸುದ್ದಿಗೋಷ್ಟಿಯಲ್ಲಿ ಅಧಿಕೃತ ಅಭ್ಯರ್ಥಿಗಳ ಹೆಸರು ಘೋಷಿಸಿದ್ದಾರೆ.


ಇದರಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಗುಲ್ಜಾರ್ ಬಾನು, ಮಾಜಿ ಶಾಸಕ ಮೊಯಿದ್ದೀನ್ ಬಾವ ಮೇಲೆ ಕಿಡಿಕಾರಿದ್ದಾರೆ. ಇದರಿಂದ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಗುಲ್ಜಾರ್ ಬಾನು ಪುತ್ರ ಮಾಜಿ ಶಾಸಕ ಮೊಯಿದ್ದೀನ್ ಬಾವಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ಹಾಗೇ ಈ ವೇಳೆ ಮಾಜಿ ಸಚಿವ ರಮಾನಾಥ್ ರೈ, ಯುಟಿ ಖಾದರ್ ಇನ್ನಿತರು ಉಪಸ್ಥಿತರಿದ್ದರು ಎನ್ನಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಅಂತ್ಯಸಂಸ್ಕಾರಕ್ಕೆ ಹೋದವಳು ಅತ್ಯಾಚಾರಕ್ಕೊಳಗಾಗಿ ಹೆಣವಾದಳು