Webdunia - Bharat's app for daily news and videos

Install App

ಕೆ.ಜೆ.ಜಾರ್ಜ್‌ಗೆ ಕ್ಲೀನ್ ಚಿಟ್ ನೀಡಿ, ಡಿವೈಎಸ್‌ಪಿ ಕುಟುಂಬಕ್ಕೆ ಅನ್ಯಾಯವೆಸಗಲಾಗಿದೆ: ಶೆಟ್ಟರ್

Webdunia
ಸೋಮವಾರ, 19 ಸೆಪ್ಟಂಬರ್ 2016 (15:24 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ತನಿಖೆ ನಡೆಸಿದ ಸಿಐಡಿ ತಂಡ ಆರೋಪಿಗಳಾದ ಮಾಜಿ ಸಚಿವ ಜಾರ್ಜ್, ಇಬ್ಬರು ಐಪಿಎಸ್ ಅಧಿಕಾರಿಗಳ ಪರ ಬಿ ರಿಪೋರ್ಟ್ ಸಲ್ಲಿಸಿರುವುದು ಮೃತ ಗಣಪತಿ ಕುಟುಂಬಕ್ಕೆ ಅನ್ಯಾಯವೆಸಗಿದಂತಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
 
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ಅಂದರೆ ಕಾಂಗ್ರೆಸ್ ಇನ್‌ವೆಸ್ಟಿಗೇಶನ್ ಡಿಪಾರ್ಟ್‌ಮೆಂಟ್ ಎಂದಂತೆ. ಸಿಐಡಿ ತಂಡ ಗಡುವಿಗೆ ಮುಂಚೆಯೇ ವರದಿ ಸಲ್ಲಿಸಿರುವುದು ಅನುಮಾನಕ್ಕೆ ಕಾರಣವಾಗಿದೆ. ಜಾರ್ಜ್ ಅವರನ್ನು ಮತ್ತೆ ಬೇಗ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಹುನ್ನಾರವಾಗಿದೆ ಎಂದು ಆರೋಪಿಸಿದರು.
 
ಹಿರಿಯ ಸಾಹಿತಿ, ಸಂಶೋಧಕ ಎಂ.ಎಂ.ಕಲಬುರಗಿ, ಕ್ರಿಕೆಟ್ ಬೆಟ್ಟಿಂಗ್ ಮತ್ತು ದಿವಂಗತ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ್ ಬಂಡೆ ಪ್ರಕರಣಗಳ ತನಿಖೆ ನಡೆಸುವಲ್ಲಿ ವಿಫಲವಾಗಿರುವ ಸಿಐಡಿ, ಜಾರ್ಜ್ ಆರೋಪಿಯಾಗಿರುವ ಪ್ರಕರಣದಲ್ಲಿ ಕೇವಲ 45 ದಿನಗಳಲ್ಲಿ ಬಿ ರಿಪೋರ್ಟ್ ಸಲ್ಲಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.   
 
ಸಿಐಡಿ ತಂಡ ಕ್ಲೀನ್ ಚಿಟ್ ನೀಡಿದ ಮಾತ್ರಕ್ಕೆ ಆರೋಪಿಗಳು ಆರೋಪ ಮುಕ್ತ ಎಂದು ಭಾವಿಸಬೇಕಾಗಿಲ್ಲ. ನಿವೃತ್ತ ನ್ಯಾಯಮೂರ್ತಿ ಕೇಶವನಾರಾಯಣ್ ನೇತೃತ್ವದ ನ್ಯಾಯಾಂಗ ಆಯೋಗ ಪ್ರಕರಣದ ಬಗ್ಗೆ ತನಿಖೆ ಆರಂಭಿಸಬೇಕಾಗಿದೆ. ಆದರೆ, ಸರಕಾರ ಇಲ್ಲಿಯವರೆಗೆ ನ್ಯಾಯಮೂರ್ತಿಗೆ ಕಚೇರಿ ಮತ್ತು ಇತರ ದಾಖಲೆಗಳನ್ನು ಹಸ್ತಾಂತರಿಸದಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ದಶಕದ ಬಳಿಕ ನಡೆದ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಇಸ್ರೇಲ್‌ನಲ್ಲಿ ಆರೈಕೆ ಮಾಡುತ್ತಿದ್ದ ಮಹಿಳೆಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಕೇರಳದ ಯುವಕ

ಮುಂದಿನ ಸುದ್ದಿ
Show comments