Webdunia - Bharat's app for daily news and videos

Install App

ಆತ್ಮಹತ್ಯೆ ಕೇಸ್ ನಲ್ಲಿ ಕೆ.ಎಸ್.ಈಶ್ವರಪ್ಪಗೆ ಕ್ಲೀನ್ ಚಿಟ್

Webdunia
ಗುರುವಾರ, 21 ಜುಲೈ 2022 (16:00 IST)
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿರುವ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿ, ಪೊಲೀಸರು ಸಲ್ಲಿಸಿರುವ 'ಬಿ ರಿಪೋರ್ಟ್‌' ನ್ಯಾಯ ಸಿಗಬಹುದೆಂಬ ಭರವಸೆಯಿಂದ ಕಾಯುತ್ತಿದ್ದ ಮೃತನ ಕುಟುಂಬದ ನೋವನ್ನು ಇನ್ನಷ್ಟು ಹೆಚ್ಚಿಸಿದೆ. ಇದೇ ಕಾರಣಕ್ಕಾಗಿ ನಾನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದು ಎಂದು ಹೇಳಿದ್ದಾರೆ. ತನಿಖೆಗೆ ಮೊದಲೇ ಮುಖ್ಯಮಂತ್ರಿಗಳಾದಿಯಾಗಿ ಸಚಿವರು, ಬಿಜೆಪಿ ಶಾಸಕರು, ಆರೋಪಿ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿದ್ದರು. ಇದನ್ನೇ ಪೊಲೀಸ್ ಇಲಾಖೆ ಸ್ವಲ್ಪ ತಡವಾಗಿ 'ಬಿ ರಿಪೋರ್ಟ್' ರೂಪದಲ್ಲಿ ನೀಡಿದೆ. ಇದರಲ್ಲಿ ಆಶ್ಚರ್ಯಪಡುವಂತದ್ದು ಏನಿಲ್ಲ. ಸಾವಿಗೆ ಈಶ್ವರಪ್ಪ ಅವರೇ ನೇರಕಾರಣ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾದರೂ, ಆರೋಪಿ ಸ್ಥಾನದಲ್ಲಿರುವ ಈಶ್ವರಪ್ಪ ಅವರನ್ನು ಒಮ್ಮೆಯೂ ವಿಚಾರಣೆ ನಡೆಸದಿರುವುದು ತನಿಖೆಯ ವಿಶ್ವಾಸಾರ್ಹತೆಯನ್ನು ತೋರಿಸುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

Video: ಮದುಮಗನ ದಿರಿಸಿನಲ್ಲಿ ಮೆಟ್ರೋ ಏರಿದ ಮದುಮಗ: ಕಾರಣ ನಿಜಕ್ಕೂ ಶಾಕಿಂಗ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments