Webdunia - Bharat's app for daily news and videos

Install App

ಕೋವಿಡ್ ಮತ್ತು ಪ್ರವಾಹ ನಿರ್ವಹಣೆ ಕುರಿತಂತೆ ಸ್ಪಷ್ಟ ಚಿತ್ರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Webdunia
ಮಂಗಳವಾರ, 15 ಫೆಬ್ರವರಿ 2022 (20:37 IST)
ಬೆಂಗಳೂರು: ಸರಕಾರ ಕೋವಿಡ್ ಮತ್ತು ಪ್ರವಾಹ ನಿರ್ವಹಣೆ ಕುರಿತಂತೆ ಕೈಗೊಂಡಿರುವ ಕಾರ್ಯಕ್ರಮಗಳ ಸ್ಪಷ್ಟ ಚಿತ್ರಣವನ್ನು ರಾಜ್ಯಪಾಲರು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾಡಿದ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದರು.
ವರ್ಷದ ಆರಂಭದಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಾರೆ. ಕಳೆದ ಒಂದು ವರ್ಷದಲ್ಲಿ ಆಗಿರುವ ಕೋವಿಡ್ ಮತ್ತು ಪ್ರವಾಹ ನಿರ್ವಹಣೆ ಕುರಿತಂತೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಪ್ರಗತಿಯಾಗಿರುವ ಬಗ್ಗೆ ಸ್ಪಷ್ಟ ಚಿತ್ರಣ ನೀಡಿದ್ದಾರೆ. ಹಲವಾರು ಇಲಾಖೆಗಳ ಸಾಧನೆಯನ್ನೂ ಬಿಂಬಿಸುವುದಿದೆ ಎಂದರು.
ರಾಜ್ಯಪಾಲರ ಭಾಷಣದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯನವರು ರಾಜ್ಯಪಾಲರಿಂದ ಸರಕಾರ ಸುಳ್ಳು ಹೇಳಿಸಿದೆ ಎಂದು ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸದನದಲ್ಲಿ ಉತ್ತರ ನೀಡುವಾಗ ಇನ್ನಷ್ಟು ಮಾಹಿತಿಯನ್ನು ನೀಡಲಾಗುವುದು. ವಿರೋಧ ಪಕ್ಷದವರಿಗೆ ಅಧಿವೇಶನದಲ್ಲಿಯೇ ಉತ್ತರ ನೀಡಲಾಗುವುದು. ಯಾವುದು ಸತ್ಯ ಯಾವುದು ಸುಳ್ಳು ಎನ್ನುವುದನ್ನು ಜನ ತೀರ್ಮಾನ ಮಾಡುತ್ತಾರೆ ಎಂದರು.
ಹಿಜಾಬ್ ಧರಿಸದಿದ್ದರೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಲಿವೆ ಎಂಬ ಶಾಸಕ ಜಮೀರ್ ಅಹಮದ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರ ವಿಚಾರಗಳು ಎಷ್ಟು ಸಮಂಜಸ, ಅವರ ಮನೋಭಾವ ಎಂಥದ್ದು ಎಂದು ಅವರ ಹೇಳಿಕೆಯಿಂದಲೇ ತಿಳಿಯುತ್ತದೆ. ಇಡೀ ದೇಶವೇ ಅವರ ಹೇಳಿಕೆಯನ್ನು ಖಂಡಿಸುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments