Select Your Language

Notifications

webdunia
webdunia
webdunia
webdunia

ಬಟ್ಟೆ ಹರಿದ ಪೊಲೀಸರು: ಕೈ ನಾಯಕ ವೇಣುಗೋಪಾಲ್ ಅಸ್ವಸ್ಥ

ಬಟ್ಟೆ ಹರಿದ ಪೊಲೀಸರು
ನಾಯಕ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಸೋಮವಾರ ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಕೈ ನಾಯಕ ವೇಣುಗೋಪಾಲ್ ಅವರ ಬಟ್ಟೆ ಹರಿದಿದ್ದು, ಈ ವೇಳೆ ನಡೆದ ತಳ್ಳಾಟದಲ್ಲಿ ಅವರು ಅಸ್ವಸ್ಥಗೊಂಡ ಘಟನೆ ನಡೆದಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇಡಿ ಮುಂದೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದು, ಅವರಿಗೆ ಪ್ರಿಯಾಂಕಾ ಗಾಂಧಿ ಸಹ ಸಾಥ್ ಕೊಟ್ಟಿದ್ದಾರೆ. ಈ ವೇಳೆ ಇಡಿ ಕಚೇರಿ ಹೊರಗೆ ಇದ್ದ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಬೆಂಬಲ ಸೂಚಿಸಲು ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೂ ಪಾದಯಾತ್ರೆ ಮಾಡಿದರು. 
ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಏಳು ಬಸ್ಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ. ಇಡಿ ಕಚೇರಿ ಬಳಿ ಬಂದಿದ್ದ ಕಾಂಗ್ರೆಸ್ ನಾಯಕರಾದ ಕೆ.ಸಿ.ವೇಣುಗೋಪಾಲ್ ಮತ್ತು ಡಿ.ಕೆ.ಸುರೇಶ್ ಮತ್ತಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ವೇಳೆ ಪೊಲೀಸರು ವೇಣುಗೋಪಾಲ್ ಅವರ ಅಂಗಿಯನ್ನು ಹರಿದಿದ್ದು, ಅವರು ಅಸ್ವಸ್ಥರಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇ.ಡಿ ಕಚೇರಿ ಬಳಿ ನಡೆದ ಪ್ರತಿಭಾಟನೆಯಲ್ಲಿ ಕಾಂಗ್ರೆಸ್ ನಾಯಕರ ಮಾತು