Webdunia - Bharat's app for daily news and videos

Install App

ಸಿದ್ದಗಂಗಾ ಶ್ರೀ ಹೆಸರಲ್ಲಿ ಯೋಜನೆ ಘೋಷಣೆ ಮಾಡಿದ ಸಿಎಂ!

Webdunia
ಗುರುವಾರ, 31 ಜನವರಿ 2019 (19:58 IST)
ನಡೆದಾಡುವ ದೇವರು ಖ್ಯಾತಿಯ ಡಾ. ಶಿವಕುಮಾರ ಸ್ವಾಮೀಜಿಯವರ ಹೆಸರು ಅಮರವಾಗಿ ಉಳಿಸಲು ಹಲವು ಯೋಜನೆಗಳನ್ನು ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಯೋಜನೆಗಳ ಕುರಿತು ಈಗಾಗಲೇ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದ್ದು, ಬಜೆಟ್ನಲ್ಲಿ ಹೊಸ ಯೋಜನೆಗಳನ್ನು ಪ್ರಕಟಿಸಲಾಗುವುದು ಎಂದರು.

ತುಮಕೂರು ಸಿದ್ದಗಂಗೆಯ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ನಡೆದ ಲಿಂ. ಡಾ. ಶಿವಕುಮಾರ ಸ್ವಾಮೀಜಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಮಾರಸ್ವಾಮಿ, ಸಿದ್ದಗಂಗಾ ಶ್ರೀಗಳು ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆ ಅಪಾರವಾಗಿದೆ. ಶ್ರೀಗಳ ಸೇವೆ ಬಗ್ಗೆ ಪದ ಬಳಕೆ ಮಾಡುವ ಶಕ್ತಿ ನಮಗಿಲ್ಲ ಎಂದರು.

ಸ್ವಾಮೀಜಿಯವರು ಜನಿಸಿದ ಮಾಗಡಿ ತಾಲ್ಲೂಕು ವೀರಾಪುರ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಘೋಷಿಸಿದರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments