Webdunia - Bharat's app for daily news and videos

Install App

ರೈತರ ಬೆಳೆ ಸಾಲ ಮನ್ನಾ ಒಂದೇ ಕಂತಿನಲ್ಲಿ ಭರಿಸುವುದಾಗಿ ಘೋಷಣೆ ಮಾಡಿದ ಸಿಎಂ

Webdunia
ಶುಕ್ರವಾರ, 4 ಜನವರಿ 2019 (11:24 IST)
ಬೆಂಗಳೂರು : ರೈತರ ಬೆಳೆ ಸಾಲ ಮನ್ನಾ 46 ಸಾವಿರ ಕೋಟಿ ರೂ.ಗಳನ್ನು ಒಂದೇ ಕಂತಿನಲ್ಲಿ ಭರಿಸುವುದಾಗಿ ಘೋಷಣೆ ಮಾಡುವುದರ ಮೂಲಕ ಸಿಎಂ ಕುಮಾರಸ್ವಾಮಿ ರಾಜ್ಯದ ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ.


ರೈತರ ಬೆಳೆ ಸಾಲ ಮನ್ನಾ ಯೋಜನೆಯ ಹಣವನ್ನು 4 ಕಂತುಗಳಲ್ಲಿ 4 ವರ್ಷಗಳ ಅವಧಿಗೆ ಬ್ಯಾಂಕ್ ಗಳಿಗೆ ಭರಿಸುವುದಾಗಿ ಹೇಳಲಾಗಿತ್ತು. ಆದರೆ ಇದೀಗ ಈ ನಿರ್ಧಾರದಿಂದ ಹಿಂದೆ ಸರಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಒಂದೇ ಕಂತಿನಲ್ಲಿ ಭರಿಸುವುದಾಗಿ ಹೇಳಿದ್ದಾರೆ.


ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದ ಆವರಣದಲ್ಲಿ ನಡೆದ ಪಕ್ಷದ ಮುಖಂಡರ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಿಎಂ, ಟೀಕಾಕಾರರು ರೈತರಲ್ಲಿ ಅವಿಶ್ವಾಸ ಮೂಡಿಸುವ ಹುನ್ನಾರ ನಡೆಸಿದ್ದು, ಅದಕ್ಕೆ ಅಸ್ಪದ ಕೊಡಬಾರದೆಂಬ ಕಾರಣಕ್ಕೆ ಒಂದೇ ಕಂತಿನಲ್ಲಿ ಸಾಲಮನ್ನಾ ಯೋಜನೆಯ ಸಂಪೂರ್ಣ ಹಣವನ್ನು 2019-2020 ನೇ ಸಾಲಿನಲ್ಲಿ ಭರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments