Webdunia - Bharat's app for daily news and videos

Install App

ಗುದ್ದಲಿ ಹಿಡಿದಿದ್ದ ಸಿಇಓ ಅಶ್ವತಿ ಕಾರ್ಯಕ್ಕೆ ಸಿಎಂ ಶ್ಲಾಘನೆ

Webdunia
ಗುರುವಾರ, 31 ಆಗಸ್ಟ್ 2017 (20:29 IST)
ಗ್ರಾಮೀಣ ಪ್ರದೇಶಗಳಿಗೆ ತೆರಳಿ ಶೌಚಾಲಯ ನಿರ್ಮಾಣಕ್ಕಾಗಿ ಗುದ್ದಲಿ ಹಿಡಿದು ಶೌಚಗುಂಡಿ ತೆಗೆದಿದ್ದ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಅಶ್ವತಿ ಕಾರ್ಯವನ್ನು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.
ಆಕ್ಟೋಬರ್ 2 ರೊಳಗೆ ಜಿಲ್ಲೆಯನ್ನು ಶೌಚಮುಕ್ತ ಜಿಲ್ಲೆಯನ್ನಾಗಿಸಬೇಕು ಎನ್ನುವ ಗುರಿಯೊಂದಿಗೆ ಸಿಇಒ ಅಶ್ವತಿ ತಮ್ಮ ಅಧಿಕಾರಿಗಳೊಂದಿಗೆ ಗ್ರಾಮ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರನ್ನು ಹುರಿದುಂಬಿಸುತ್ತಿದ್ದಾರೆ. 
 
ಸಮಾಜದಲ್ಲಿ ಬದಲಾವಣೆ ಬರಬೇಕು. ಅದಕ್ಕೆ ಅಶ್ವತಿಯಂತಹ ಅಧಿಕಾರಿಗಳು ಸಮಾಜದಲ್ಲಿ ಇರಬೇಕು. ಅವರ ಕಾರ್ಯ ಇತರರಿಗೆ ಸ್ಪೂರ್ತಿಯಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದರು.
 
ಸಾಮಾಜಿಕ ಜಾಲ ತಾಣಗಳಲ್ಲಿ ಸಿಇಒ ಅಶ್ವತಿ ಪರ ಹರಿದುಬರುತ್ತಿರುವ ಶ್ಲಾಘನೆಗಳಿಗೆ ಸ್ಪಂದಿಸಿದ ಸಿಎಂ, ಇಂತಹ ಅಧಿಕಾರಿಗಳಿಂದ ಮಾತ್ರ ರಾಜ್ಯದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments