Webdunia - Bharat's app for daily news and videos

Install App

ಔರಾದಕರ ಸಮಿತಿ ವರದಿ ಅನುಷ್ಠಾನಕ್ಕೆ ಸಿಎಂ ಒಪ್ಪಿಗೆ

Webdunia
ಶನಿವಾರ, 23 ಫೆಬ್ರವರಿ 2019 (17:25 IST)
ಪೊಲೀಸ್ ಇಲಾಖೆಯಲ್ಲಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ತಾರತಮ್ಯ ನಿವಾರಣೆಗಾಗಿ ಹಾಗೂ ಬಲವರ್ಧನೆಗಾಗಿ ರಾಘವೇಂದ್ರ ಔರಾದಕರ ಸಮಿತಿ ನೀಡಿರುವ ವರದಿಯ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳು ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

ಕಲಬುರಗಿ ನಗರದ ಹಳೆಯ ಐಜಿಪಿ ಕಚೇರಿಯಲ್ಲಿ ಪ್ರಾರಂಭಿಸಲಾದ ಪೊಲೀಸ್ ಆಯುಕ್ತಾಲಯ ಕಚೇರಿ ಉದ್ಘಾಟಿಸಿದ ನಂತರ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಈಗಾಗಲೇ ಔರಾದಕರ ಸಮಿತಿ ವರದಿಯ ಅನುಷ್ಠಾನಕ್ಕೆ ಮೂರು ಸಭೆಗಳನ್ನು ಕೈಗೊಳ್ಳಲಾಗಿದೆ.  ಪೊಲೀಸ್ ಇಲಾಖೆಯಲ್ಲಿರುವ ಹುದ್ದೆಗಳ ಅಸಮಾನತೆಯನ್ನು ಬಗೆಹರಿಸಿ ನ್ಯಾಯ ಒದಗಿಸಲು ಇನ್ನೊಂದು ಮಟ್ಟದ ಸಭೆಯನ್ನು ಕೈಗೊಳ್ಳಬೇಕಾಗಿದೆ ಎಂದರು.

ಪೊಲೀಸ್ ಇಲಾಖೆಯಲ್ಲಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ಜೀವನ ಸುಧಾರಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಪೊಲೀಸ್ ಇಲಾಖೆಯ ಸಂಪೂರ್ಣ ಬಲವರ್ಧನೆಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಎಕ್ಸಿಕ್ಯೂಟಿವ್ ಕರ್ತವ್ಯ ಸಲ್ಲಿಸಿದವರು ಮಾತ್ರ ನಾನ್ ಎಕ್ಸಿಕ್ಯೂಟಿವ್ ಕರ್ತವ್ಯಕ್ಕೆ ನೇಮಿಸುವುದನ್ನು ಕಾಯಿದೆ ರೂಪದಲ್ಲಿ ಜಾರಿಗೊಳಿಸಲಾಗುತ್ತಿದೆ. ತರಬೇತಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಹೆಚ್ಚುವರಿ ಪ್ರೋತ್ಸಾಹ ವೇತನ ನೀಡಲು ಯೋಚಿಸಲಾಗುತ್ತಿದೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments