Webdunia - Bharat's app for daily news and videos

Install App

ಇಂದು ಸಿಎಂ ಅಥಣಿ ಕ್ಷೇತ್ರ ಪ್ರವಾಸ : ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Webdunia
ಶುಕ್ರವಾರ, 11 ಆಗಸ್ಟ್ 2023 (08:18 IST)
ಚಿಕ್ಕೋಡಿ : ಲೋಕಸಭೆ ಚುನಾವಣೆಗೂ  ಮುನ್ನ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರ ಗುರಿಯಾಗಿಸಿಕೊಂಡು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಹಮ್ಮಿಕೊಂಡಿದ್ದು, ಶುಕ್ರವಾರ (ಆ.11) ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕ್ಷೇತ್ರ ಅಥಣಿಗೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
 
ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪಶು ವೈದ್ಯಕೀಯ ಮಹಾವಿದ್ಯಾಲಯ ಕಟ್ಟಡ ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಗುದ್ದಲಿಪೂಜೆ ನೆರವೇರಿಸಲಿದ್ದಾರೆ.

ಶುಕ್ರವಾರ ಬೆಳಗ್ಗೆ 11.15ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಂದ ಸಿಎಂ ಆಗಮಿಸಲಿದ್ದಾರೆ. ಬಳಿಕ ಬೆಳಗಾವಿಯ ಸಾಂಬ್ರಾ ಏರ್ಪೋರ್ಟ್ನಿಂದ ಹೆಲಿಕಾಪ್ಟರ್ ಮೂಲಕ ಅಥಣಿಗೆ ಪ್ರಯಾಣ ಬೆಳೆಸಲಿದ್ದಾರೆ.

ಮಧ್ಯಾಹ್ನ 12ಕ್ಕೆ ಅಥಣಿಯ ಕೆಎಲ್ಇ ಕಾಲೇಜು ಹೆಲಿಪ್ಯಾಡ್ಗೆ ಆಗಮಿಸಿ ಮಧ್ಯಾಹ್ನ 12.30ಕ್ಕೆ ಅಥಣಿಯಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ. ಅಥಣಿಯಿಂದ ಕೊಕಟನೂರ ಗ್ರಾಮಕ್ಕೆ ತೆರಳಲಿರುವ ಸಿಎಂ ಮಧ್ಯಾಹ್ನ 12.50ಕ್ಕೆ ಕೊಕಟನೂರು ಗ್ರಾಮದಲ್ಲಿ ಅದ್ಧೂರಿ ಸಮಾರಂಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಗುದ್ದಲಿಪೂಜೆ ನೆರವೇರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments