ಕಾಂಗ್ರೆಸ್ ಆರೋಪಕ್ಕೆ ಸಿಎಂ ಬೊಮ್ಮಾಯಿ ಸ್ಪಷ್ಟನೆ

Webdunia
ಸೋಮವಾರ, 25 ಅಕ್ಟೋಬರ್ 2021 (14:46 IST)
ವಿಜಯಪುರ : ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಯಾವುದೇ ಕೆಲಸಗಳೂ ನಿಂತಿಲ್ಲ. ಎಲ್ಲವೂ ಎಂದಿನಂತೆ ಮುನ್ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧಕ್ಕೆ ಬೀಗ ಜಡಿದು ಸಚಿವರೆಲ್ಲಾ ಪ್ರಚಾರಕ್ಕೆ ಬಂದಿದ್ದಾರೆ ಎಂಬ ಕಾಂಗ್ರೆಸ್ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಅವರು, ಅವರು ಹಿಂದೆ ಏನೆಲ್ಲಾ ಮಾಡಿದ್ದಾರೆ ಎಂಬುದು ನಮಗೂ ಗೊತ್ತಿದೆ. ನಾನು ಸಚಿವರಿಗೆ ಏನು ಸೂಚನೆ ಕೊಡಬೇಕೋ ಕೊಟ್ಟಿದೇನೆ. ಯಾವುದೇ ಕೆಲಸಗಳು ನಿಂತಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಪ್ರಾದೇಶಿಕ ಪಕ್ಷವನ್ನು ಬಿಜೆಪಿ, ಕಾಂಗ್ರೆಸ್ ಮುಗಿಸುತ್ತವೆ ಎಂಬ ದೇವೇಗೌಡರ ಹೇಳಿಕೆಗೂ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಜೆಡಿಎಸ್ ಅನ್ನು ಮುಗಿಸುವ ಪ್ರಶ್ನೆ ಇಲ್ಲ, ನಮ್ಮ ಪಕ್ಷದ ಸಂಘಟನೆ ಮಾತ್ರ ನಾವು ಮಾಡುತ್ತಿದ್ದೇವೆ. ಇನ್ನೊಂದು ಪಕ್ಷದ ಕಡೆಗೆ ನಾವು ತಿರುಗಿಯೂ ನೋಡುವುದಿಲ್ಲ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments