Publish Date: Sun, 23 Apr 2023 (20:50 IST)
Updated Date: Sun, 23 Apr 2023 (20:19 IST)
ಈ ಬಾರಿ ಜನತೆ ಸತ್ಯ, ನ್ಯಾಯ ಮತ್ತು ಸಮಾನತೆಗೆ ಆಶೀರ್ವಾದ ಮಾಡುತ್ತಾರೆ. ಅದೇ ಪಥದಲ್ಲಿ ಬಿಜೆಪಿ ನಡೆಯುತ್ತಿದ್ದು, ಬಿಜೆಪಿ ಜಯ ನಿಶ್ಚಿತ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.ಬಸವ ಜಯಂತಿಯ ಅಂಗವಾಗಿ ವಿಧಾನಸೌಧದ ಮುಂಬಾಗದಲ್ಲಿರುವ ಬಸವಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.ನಂತರ ಚಾಲುಕ್ಯ ವೃತ್ತದ ಬಳಿಯಿರುವ ಬಸವಣ್ಣನವರ ಪ್ರತಿಮೆಗೂ ಮಾಲಾರ್ಪಣೆ ಮಾಡಿದರು ಈ ವೇಳೆ ಮಾತನಾಡಿ ನವ ಕರ್ನಾಟಕ ನಿರ್ಮಾಣ ಮಾಡುವ ಸಂಕಲ್ಪವಿದೆ. ಕುಲಕುಲಗಳಲ್ಲಿ ವ್ಯತ್ಯಾಸವನ್ನು ಹಾಗೂ ಬಡಿದಾಟವನ್ನು ಉಂಟು ಮಾಡುವ ಶಕ್ತಿಗಳಿಗೆ ದೇವರು ಸದ್ಭುದ್ದಿ ಕೊಡಲಿ. ಚುನಾವಣೆಯಲ್ಲಿ ಜನರು ತೀರ್ಪು ನೀಡುತ್ತಾರೆ. ಅದನ್ನು ಎಲ್ಲರೂ ಒಪ್ಪಬೇಕು. ನಮ್ಮ ಧ್ಯೇಯ ಧೋರಣೆಗಳನ್ನು ಮುಂದಿಟ್ಟುಕೊಂಡು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ ಎಂದರು.