Webdunia - Bharat's app for daily news and videos

Install App

ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ

Webdunia
ಗುರುವಾರ, 30 ಸೆಪ್ಟಂಬರ್ 2021 (12:03 IST)
ಬೆಂಗಳೂರು, ಸೆ.30 :  ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ರಾತ್ರಿ ಬೆಂಗಳೂರಿನಲ್ಲಿರುವ ಆರ್ಎಸ್ಎಸ್ ಕಚೇರಿಗೆ ತೆರಳಿ ನಾಯಕರನ್ನು ಭೇಟಿ ಮಾಡಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಉಪ ಚುನಾವಣೆ ಮತ್ತಿತರ ವಿಷಯಗಳ ಬಗ್ಗೆ ಹಿರಿಯ ಆರ್ಎಸ್ಎಸ್ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವೇಳೆ ನಾಯಕರು ಕೆಲವು ಸಲಹೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.
ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಸಿಎಂ ಬಸವರಾಜ ಬೊಮ್ಮಾಯಿ ಅವರ ನಾಯಕತ್ವಕ್ಕೆ ಅಗ್ನಿ ಪರೀಕ್ಷೆಯಾಗಿದೆ. ಬೊಮ್ಮಾಯಿ ನಾಯಕತ್ವದಲ್ಲಿ ಎದುರಾಗುತ್ತಿರುವ ಮೊದಲ ದೊಡ್ಡ ಚುನಾವಣೆ ಇದಾಗಿದೆ. ಹಾನಗಲ್ ಕ್ಷೇತ್ರ ಹಾವೇರಿಯಲ್ಲಿದ್ದು, ಸಿಎಂ ತವರು ಜಿಲ್ಲಾಯಾಗಿದೆ.
ಉಪ ಚುನಾವಣೆ, ದೇವಾಲಯಗಳ ತೆರವು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಆರ್ಎಸ್ಎಸ್ ನಾಯಕರ ಜೊತೆ ಸಮಾಲೋಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂತ್ರಿ ಆಗಕ್ಕೆ ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಆಗಬೇಕಾ: ಕಾಂಗ್ರೆಸ್ ಗೆ ಬಿಗ್ ಶಾಕ್ ಕೊಟ್ಟ ಇಬ್ಬರು ಶಾಸಕರು

ಕೇರಳದಲ್ಲಿ ರಣಭೀಕರ ಮಳೆಗೆ 15ಮಂದಿ ಸಾವು, 7ಮಂದಿ ಮಿಸ್ಸಿಂಗ್

ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್‌: ಬಿಜೆಪಿ ನಾಯಕ ಬ್ರಿಜ್ ಭೂಷಣ್‌ ಸಿಂಗ್‌ಗೆ ಬಿಗ್ ರಿಲೀಫ್‌

ಎಂಥಾ ಅಪಾಯದಲ್ಲಿ ಮಕ್ಕಳು ಶಾಲೆಗೆ ಹೋಗ್ತಾರೆ, ಏನಾದ್ರೂ ಅಪಾಯ ಆದ್ರೆ ಯಾರು ಹೊಣೆ video

ವಿಚ್ಛೇಧನದ ಬಳಿಕ ಖಿನ್ನತೆಗೊಳಗಾದ ಮನೋವೈದ್ಯೆ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮುಂದಿನ ಸುದ್ದಿ
Show comments