Webdunia - Bharat's app for daily news and videos

Install App

ಸಿಎಂ ಬೊಮ್ಮಾಯಿಗೆ ಮತ್ತೆ ಶುರುವಾಯ್ತು ಟೆನ್ಷನ್

Webdunia
ಗುರುವಾರ, 3 ಫೆಬ್ರವರಿ 2022 (14:44 IST)
ರಾಜ್ಯ ಸಚಿವ ಸಂಪುಟ ಸೇರಲು ಬಿಜೆಪಿ ಶಾಸಕರಿಂದ ಭಾರೀ ಲಾಬಿ ಶುರುವಾಗಿದೆ. ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ಎರಡು ಡಜನ್‍ಗೂ ಅಧಿಕ ಶಾಸಕರು ಮಂತ್ರಿ ಸ್ಥಾನದ ಕುರ್ಚಿಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.
 
'ಉಳಿದಿರುವ ಒಂದೂವರೆ ವರ್ಷಗಳ ಅವಧಿಯಲ್ಲಾದರೂ ಮಂತ್ರಿಯಾಗಲೇಬೇಕೆಂದು ಪಟ್ಟು ಹಿಡಿದಿರುವ ಶಾಸಕರು ತಮ್ಮ ತಮ್ಮ ಗಾಡ್ ಫಾದರ್ ಗಳ ಮೂಲಕ ಲಾಬಿ ನಡೆಸುತ್ತಿದ್ದಾರೆ.
ಶಾಸಕರ ಲಾಬಿ ಸಿಎಂ ಬೊಮ್ಮಾಯಿ ಹಾಗೂ ವರಿಷ್ಠರಿಗೂ ಕಗ್ಗಂಟಾಗಿದೆ. ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ , ರಾಜ್ಯ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಮೂಲಕ ಒತ್ತಡ ತಂತ್ರದ ಮೊರೆ ಹೋಗಿದ್ದಾರೆ.
 
ಜಾರಕಿಹೊಳಿ ಸಹೋದರರು ಈ ಬಾರಿ ಸಂಪುಟಕ್ಕೆ ಸೇರಲು ಇನ್ನಿಲ್ಲದಂತೆ ಪ್ರಯತ್ನ ನಡೆಸಿದ್ದಾರೆ. ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಮೂಲಕ ಮಾಜಿ ಸಚಿವ ಲಾಭಿ ಮುಂದುವರೆಸಿದ್ದಾರೆ. ಇತ್ತ ಶಾಸಕರಾದ ಅರವಿಂದ್ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್, ವಿಧಾನಪರಿಷತ್ ಸದಸ್ಯರಾದ ಸಿಪಿ ಯೋಗೀಶ್ವರ್, ಆರ್. ಶಂಕರ್, ರಾಮ್ ದಾಸ್, ಪೂರ್ಣಿಮಾ ಶ್ರೀನಿವಾಸ್, ಎಂಪಿ ರೇಣುಕಾಚಾರ್ಯ, ರಾಜು ಗೌಡ ಪ್ರೀತಮ್ ಗೌಡ ಸೇರಿದಂತೆ ಸಾಕಷ್ಟು ಜನ ಶಾಸಕರು ಲಾಭಿ ಮುಂದುವರಿಸಿದ್ದಾರೆ. ಇತ್ತ ಹೈಕಮಾಂಡ್ ಭೇಟಿಗೆ ಸಿಎಂ ಸೋಮವಾರ ಮುಂದಾಗಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments