Select Your Language

Notifications

webdunia
webdunia
webdunia
webdunia

ಸಿಎಂ ಬಿಎಸ್ ವೈ ಆಡಿಯೋ ಲೀಕ್; ಆಂತರಿಕ ತನಿಖೆಗೆ ಸಮಿತಿ ರಚನೆ ವಿಳಂಬವಾಗುತ್ತಿರುವುದೇಕೆ?

ಸಿಎಂ ಬಿಎಸ್ ವೈ ಆಡಿಯೋ ಲೀಕ್; ಆಂತರಿಕ ತನಿಖೆಗೆ ಸಮಿತಿ ರಚನೆ ವಿಳಂಬವಾಗುತ್ತಿರುವುದೇಕೆ?
ಬೆಂಗಳೂರು , ಬುಧವಾರ, 6 ನವೆಂಬರ್ 2019 (11:28 IST)
ಬೆಂಗಳೂರು : ಅಪರೇಷನ್ ಕಮಲದ  ಬಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಮಾತನಾಡಿದ ಆಡಿಯೋ ವೈರಲ್ ಆದ ಕಾರಣ ಈ ಬಗ್ಗೆ ಆಂತರಿಕ ತನಿಖೆ ನಡೆಸುವುದಾಗಿ ಹೇಳಿದ ಬಿಜೆಪಿ ಇದೀಗ ಹಿಂದೇಟು ಹಾಕುತ್ತಿದೆ ಎನ್ನಲಾಗಿದೆ.




ಹೌದು. ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಮಾತನಾಡಿದ ಆಡಿಯೋ ಕಾಂಗ್ರೆಸ್ ನವರಿಗೆ ಹೇಗೆ ಸಿಕ್ಕಿದೆ? ಇದನ್ನು ಮಾಡಿದವರು ಯಾರು ಎಂಬ ಬಗ್ಗೆ ಮಾಹಿತಿ ಕಲೆ ಹಾಕಲು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮಿತಿ ರಚಿಸಿ ಆತಂರಿಕ ತನಿಖೆ ನಡೆಸುವುದಾಗಿ ಹೇಳಿದ್ದರು.


ಆದರೆ ಇದೀಗ ನಾಲ್ಕೈದು ದಿನ ಕಳೆದರೂ ಇನ್ನೂ  ಆಂತರಿಕ ತನಿಖೆ ನಡೆಸಲು ಸಮಿತಿ ರಚನೆಯಾಗದ ಹಿನ್ನಲೆಯಲ್ಲಿ ಇದರಿಂದ ಬಿಜೆಪಿ ನಾಯಕರ ಹೆಸರು ಬಹಿರಂಗವಾಗಲಿದ್ದು, ಪಕ್ಷ ಮಾರ್ಯಾದೆ ಹೋಗುತ್ತದೆ ಎಂಬ ಕಾರಣಕ್ಕೆ ಸಮಿತಿ ರಚಿಸಲು ಹಿಂದೇಟು ಹಾಕಲಾಗಿದೆ ಎನ್ನಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಇದೀಗ ದೇಹಲಿಯಲ್ಲಿದ್ದು, ಅವರು ಮರಳಿದ ಬಳಿಕ ಈ ಬಗ್ಗೆ ತೀರ್ಮಾನಿಸಲಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಬಿಎಸ್ ಪಿ ಸೇರಿಕೊಳ್ಳುವ ಪ್ರಶ್ನೆಯೇ ಇಲ್ಲ- ಶಾಸಕ ಎನ್.ಮಹೇಶ್ ಸ್ಪಷ್ಟನೆ