Webdunia - Bharat's app for daily news and videos

Install App

ಇಂದು ಮಧ್ಯಾಹ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಬಿಎಸ್ ವೈ

Webdunia
ಭಾನುವಾರ, 28 ಜುಲೈ 2019 (11:03 IST)
ಬೆಂಗಳೂರು : ಸೋಮವಾರದ ಅಧಿವೇಶನದಲ್ಲಿ ಸಿಎಂ ಬಿ.ಎಸ್​. ಯಡಿಯೂರಪ್ಪ ಬಹುಮತ ಸಾಬೀತುಪಡಿಸುತ್ತಿರುವ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

 



ನಾಳೆ ಬಹುಮತ ಸಾಬೀತಿನ ವೇಳೆ ಎಲ್ಲಾ ಶಾಸಕರು ಹಾಜರಾಗಿರುವಂತೆ ಸೂಚಿಸಲು ಈ ಸಭೆ ಕರೆಯಲಾಗಿದೆ ಎನ್ನಲಾಗಿದೆ. ಹಾಗೇ ಇಂದು ಎಲ್ಲ ಬಿಜೆಪಿ ಶಾಸಕರಿಗೆ ವಿಪ್ ಜಾರಿಗೊಳಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.


ಅಲ್ಲದೇ ಸಭೆ ಬಳಿಕ ಶಾಸಕರಿಗೆ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್​- ಜೆಡಿಎಸ್​ ನಾಯಕರ ಸಂಪರ್ಕದಲ್ಲಿರುವ ಬಗ್ಗೆ ಈಗಾಗಲೇ ಸುದ್ದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಶಾಸಕರು ಆಪರೇಷನ್ ಹಸ್ತಕ್ಕೆ ಒಳಗಾಗದೆ ಇರುವಂತೆ ಎಚ್ಚರಿಕೆ ವಹಿಸಲು ಹಾಗೂ ನಾಳೆ ಎಲ್ಲಾ  ಶಾಸಕರೂ ಗೈರಾಗದೆ  ಅಲ್ಲಿಂದಲೇ ನೇರವಾಗಿ ವಿಧಾನಸೌಧಕ್ಕೆ ಬರಲಿ ಎಂದು ಈ ತೀರ್ಮಾನಕ್ಕೆ ಬರಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments