ಸಿಎಂ ಬಜೆಟ್ ತೆರಿಗೆ ಹೆಚ್ಚಳವಿಲ್ಲ

Webdunia
ಶುಕ್ರವಾರ, 4 ಮಾರ್ಚ್ 2022 (14:04 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಚೊಚ್ಚಲ ಬಜೆಟ್‍ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 8409 ಕೋಟಿ ರೂ.ಗಳ ಅನುದಾನ ಒದಗಿಸುವುದರ ಜತೆಗೆ 6 ಲಕ್ಷಕ್ಕೂ ಹೆಚ್ಚು ಬಿ ಸ್ವತ್ತುಗಳಿಗೆ ಎ ಖಾತಾ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಲಕ್ಷಕ್ಕೂ ಹೆಚ್ಚು ಸ್ವತ್ತುಗಳ ವಿವರಗಳನ್ನು ಬಿ ರಿಜಿಸ್ಟ್ರರ್‍ನಲ್ಲಿ ದಾಖಲಿಸಲಾಗಿದ್ದು, ಸದರಿ ಸ್ವತ್ತುಗಳನ್ನು ಎ ಖಾತೆಗೆ ದಾಖಲಿಸಲು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಅನಿಯಮ ಹಾಗೂ ಕರ್ನಾಟಕ ಭೂ ಕಂದಾಯ ಅನಿಯಮಗಳಡಿ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
 
ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಜನಜೀವನ ಸುಗಮಗೊಳಿಸಲು, ಸಂಚಾರ ದಟ್ಟಣೆ ನಿವಾರಿಸಲು ಹಾಗೂ ನಗರದ ಪರಿಸರದಲ್ಲಿ ಕೆರೆಗಳ ಅಭಿವೃದ್ಧಿ, ಹಸಿರು ಹೊದಿಕೆ ಹೆಚ್ಚಿಸುವ ಮೂಲಕ ಸೌಂದರ್ಯ ವೃದ್ಧಿಗೂ ಈ ಬಾರಿಯ ಬಜೆಟ್‍ನಲ್ಲಿ ಆದ್ಯತೆ ನೀಡಲಾಗಿದೆ.
 
ನಗರದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆರು ಸಾವಿರ ಕೋಟಿ ರೂ.ಗಳ ಅಮೃತ್ ನಗರೋತ್ಥಾನ ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಯಡಿಯಲ್ಲಿ ಪಾಲಿಕೆ ವ್ಯಾಪ್ತಿಯ ರಸ್ತೆ ಅಭಿವೃದ್ಧಿ, ಗ್ರೇಡ್ ಸಪರೇಟರ್, ಕೆರೆ ಅಭಿವೃದ್ಧಿ, ಬೃಹತ್ ನೀರುಗಾಲುವೆ ಅಭಿವೃದ್ಧಿ, ಉದ್ಯಾನವನಗಳ ಅಭಿವೃದ್ಧಿ, ಕಟ್ಟಡಗಳು, ಘನತ್ಯಾಜ್ಯ ನಿರ್ವಹಣೆ, ಬೀದಿ ದೀಪಗಳು ಮತ್ತು ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ ಅನುದಾನ ಬಳಕೆ ಮಾಡಿಕೊಳ್ಳಲಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ
Show comments