Select Your Language

Notifications

webdunia
webdunia
webdunia
webdunia

ಆಡಳಿತ ಚುರುಕುಗೊಳಿಸಲು ಮುಖ್ಯಮಂತ್ರಿಯವರಿಂದ ಸಭೆ

ಮುಖ್ಯಮಂತ್ರಿ
ಬೆಂಗಳೂರು , ಮಂಗಳವಾರ, 28 ಜೂನ್ 2016 (11:15 IST)
ಆಡಳಿಕ ಚುರುಕುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಮುಂದಾಗಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆಯಬೇಕಾಗಿರುವ ಪ್ರಗತಿ ಪರಿಶೀಲನಾ ಸಭೆಗೆ ಎಲ್ಲ ಶಾಸಕರು ಅಧಿಕಾರಿಗಳ ಮುಂಚೆಯೇ ಮುಖ್ಯಮಂತ್ರಿಯವರು ಆಗಮಿಸಿದ್ದಾರೆ. ತದನಂತರ ಶಾಸಕರು ಮತ್ತು ಅಧಿಕಾರಿಗಳು ಆಗಮಿಸಿದ್ದಾರೆ.
 
ವಿವಿಧ ಇಲಾಖೆಯ ಪ್ರಗತಿಯನ್ನು ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಇಲಾಖೆಗೆ ಹಾಸ್ಟೆಲ್ ನಿರ್ಮಿಸಲು ಮೂರು ತಿಂಗಳಲ್ಲಿ ಜಾಗ ಮಂಜೂರು ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರಸಕ್ತ ಸಾಲಿನ ನವೆಂಬರ್ ತಿಂಗಳಲ್ಲಿ ಮತ್ತೋಮೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತೇನೆ. ಆ ವೇಳೆಗೆ ಹಾಸ್ಟೆಲ್ ನಿರ್ಮಿಸಲು ಜಾಗ ಮಂಜೂರು ಮಾಡದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಎಟಿಎಮ್‌ನಿಂದ ಹಣ ಪಡೆಯುವವರು ಈ ವಿಡಿಯೋ ನೋಡಲೇಬೇಕು