ಅಂಗಾಂಗ ದಾನಕ್ಕೆ ಸಿಎಂ ಕರೆ

Webdunia
ಶನಿವಾರ, 13 ಆಗಸ್ಟ್ 2022 (17:55 IST)
ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ವಿಶ್ವ ಅಂಗಾಂಗ ದಾನ ದಿನಾಚರಣೆ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ ಕುಟುಂಬಸ್ಥರನ್ನು ಮುಖ್ಯಮಂತ್ರಿಯವರು ಸನ್ಮಾನ ಮಾಡಿದರು..ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸತ್ತ ಮೇಲೆ ನಮ್ಮ ದೇಹದಾನದಿಂದ 8 ಜನ ಬದುಕುತ್ತಾರೆ..ಮಾನವ ಜನ್ಮ ಶ್ರೇಷ್ಠವಾದದ್ದು. ಅದನ್ನು ಉಳಿಸುವ ಕೆಲಸ ಮಾಡಬೇಕಿದೆ. ಸಾಧಕನಿಗೆ ಸಾವಿಲ್ಲ, ಸಾವಿನ ನಂತರವು ಬದುಕಬಹುದು. ಇದೇ ರೀತಿಯಲ್ಲಿ ಅಂಗಾಂಗ ದಾನದ ಮೂಲಕ ಸತ್ತನಂತರವೂ ಬದುಕಬಹುದು..ರಾಜ್ಯಾದ್ಯಂತ 18 ಕೇಂದ್ರಗಳಿದ್ದು, ಈ ಕೇಂದ್ರಗಳಲ್ಲಿ ಅಂಗಾಂಗ ದಾನ ಮಾಡಲು ಇಚ್ಛಿಸುವವರು ಹೆಸರು ನೋಂದಾಯಿಸಿಕೊಳ್ಳಬಹುದು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ಮುಂದಾಗಬೇಕು. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಮಾಡಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಜೊತೆ ಪ್ರಮಾಣ ವಚನ ಸ್ವೀಕರಿಸಲಿರುವ 13 ಸಚಿವರು ಇವರೇ: ಖರ್ಗೆ ಪುತ್ರನಿಗೆ ದೊಡ್ಡ ಸ್ಥಾನ ಸಾಧ್ಯತೆ

ಪ್ರಮಾಣ ವಚನಕ್ಕೆ ಕೆಲವೇ ಕ್ಷಣಗಳ ಮೊದಲು ಯಡಿಯೂರಪ್ಪ ನಿವಾಸಕ್ಕೆ ಡಿಕೆ ಶಿವಕುಮಾರ್: ಅಚ್ಚರಿಯ ಬೆಳವಣಿಗೆ

ಡಿಕೆ ಶಿವಕುಮಾರ್ ಜೀವನದ ಪವರ್ ಫುಲ್ ಮಹಿಳೆ ಯಾರು ಗೊತ್ತಾ

ಹುಡುಗಿ ಕೆನ್ನೆ ಮುಟ್ಟಬೇಕು ಎನ್ನುವಾಗ ಡಿಸ್ಟರ್ಬ್ ಮಾಡ್ತೀರಲ್ಲೋ: ಸಖತ್ ವೈರಲ್ ಆಗಿರುವ Video

ಡಿಕೆ ಶಿವಕುಮಾರ್ ಅತ್ಯಂತ ಶ್ರೀಮಂತ ಸಿಎಂ: ಎಲ್ಲೆಲ್ಲಾ ಹೂಡಿಕೆಯಿದೆ, ಎಷ್ಟು ಆಸ್ತಿಯಿದೆ ಗೊತ್ತಾ

ಮುಂದಿನ ಸುದ್ದಿ
Show comments