Publish Date: Thu, 16 Feb 2023 (19:32 IST)
Updated Date: Thu, 16 Feb 2023 (19:47 IST)
ಚುನಾವಣೆಗೆ ಕೆಲ ತಿಂಗಳಷ್ಟೇ ಬಾಕಿ ಉಳಿದಿದ್ದು, ಎಲ್ಲೆಡೆ ಚುನಾವಣೆ ಕಾವು ಜೋರಾಗಿದೆ. ಪ್ರತಿಯೊಬ್ಬರು ಕೂಡ ಸಿಎಂ ಆಗಬೇಕೆಂದು ಇಂಗಿತ ವ್ಯಕ್ತಪಡಿಸುತ್ತಿದ್ದು, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಸಿಎಂ ಆಗುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಪರಮೇಶ್ವರ್ ಸಿಎಂ ಹೇಳಿಕೆಯನ್ನು ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದು, ಪರಮೇಶ್ವರ್ ಸಿಎಂ ಹುದ್ದೆ ಕೇಳೋದ್ರಲ್ಲಿ ತಪ್ಪೇನಿದೆ. ಸಂಪೂರ್ಣವಾಗಿ ಅಧಿಕಾರಕ್ಕೆ ಬರ್ತೀವಿ ಅಂತಾ ನಮಗೆ ವಿಶ್ವಾಸ ಇದೆ. ಹತ್ತಲ್ಲ ಹದಿನೈದು ಜನ ಸಿಎಂ ಅಭ್ಯರ್ಥಿಗಳು ನಮ್ಮ ಪಕ್ಷದಲ್ಲಿ ಇದ್ದೀವಿ. ನಮ್ಮಲ್ಲಿ ಲೀಡರ್ ಶಿಪ್ ನೋಡಿ, BJPಯಲ್ಲಿ ಯಾರಿದ್ದಾರೆ? ಎಂದು ಪ್ರಶ್ನೆ ಮಾಡಿದ್ರು. ನಾವು 135 ಸ್ಥಾನ ಗೆಲ್ಲುತ್ತೀವಿ. ಈಗಾಗಲೇ ಎಲ್ಲಾರು ಒಗ್ಗಟ್ಟಾಗಿ ಕೆಲಸ ಮಾಡಿ ಅಂತಾ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.150 ಸೀಟು ಗೆಲ್ಲಬೇಕು ಅಂತಾ ರಾಹುಲ್ ಹೇಳಿದ್ದಾರೆ. ಸಿಎಂ ಅಭ್ಯರ್ಥಿ ಆಯ್ಕೆಯನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.