ಕನಕದಾಸ ಜಯಂತಿ ಆಚರಿಸಿದ ಸಿಎಂ ಬೊಮ್ಮಾಯಿ

Webdunia
ಸೋಮವಾರ, 22 ನವೆಂಬರ್ 2021 (18:18 IST)
ಕನಕದಾಸರ ತ್ರಿಪದಿಗಳು, ಸಾಹಿತ್ಯ, ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ಸಂಕಲ್ಪ ಮಾಡುವ ದಿನವಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
 
ಅವರು ಇಂದು ಶಾಸಕರ ಭವನದ ಆವರಣದ ಬಳಿ ಇರುವ ಸಂತ ಕವಿ ಶ್ರೀಕನಕದಾಸರ ಪುತ್ಥಳಿಯ ಬಳಿ ಕನಕದಾಸ ಜಯಂತಿಯ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ, ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.ದಾಸರಲ್ಲಿ ಅತ್ಯಂತ ಶ್ರೇಷ್ಠ ದಾಸರು ಕನಕದಾಸರು. ಕನ್ನಡ ನಾಡು ಕಂಡ ದಾಸ ಸಾಹಿತ್ಯಕ್ಕೆ ಬಹಳ ದೊಡ್ಡ ಕೊಡುಗೆ ನೀಡಿದ ತತ್ತ್ವಜ್ಞಾನಿ ಹಾಗೂ ಸಮಾಜ ಸುಧಾರಕರು. ವಿಶ್ವ ಮಾನವ ಕಲ್ಪನೆ ಹೊಂದಿದ್ದ ಮಾನವೀಯ ಗುಣಗಳನ್ನು ಪ್ರತಿಪಾದಿಸಿ, ಸಮಾನತೆ ಸಾರಿದರು ಎಂದು ತಿಳಿಸಿದರು.
 
ಶಿಗ್ಗಾವಿಯಲ್ಲಿ ಹುಟ್ಟಿ ಕರ್ಮಭೂಮಿ ಕಾಗಿನೆಲೆ. ದಾಸ ಪದ ಹಾಡಿ ಜೀವನದ ಸಾರವನ್ನು ತಿಳಿಸಿದರು. 'ಕುಲ ಕುಲ ಕುಲವೆಂದು ಬಡಿದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ' ಎಂದು ಮಾರ್ಮಿಕವಾಗಿ ತಿಳಿಸಿದ ಕನಕದಾಸರು ರಚಿಸಿರುವ ರಾಮಧಾನ್ಯಚರಿತಾ ಸೇರಿದಂತೆ ಹಲವಾರು ಸಾಹಿತ್ಯಗಳು ನಮಗೆ ದಾರಿದೀಪ. ಅವರ ತತ್ತ್ವ ಆದರ್ಶಗಳು ಇಂದಿಗೂ ಪ್ರಸ್ತುತ. ಅವುಗಳ ಮೂಲಕ ಸಮಾಜದಲ್ಲಿ ಶಾಂತಿ ಸಮಾನತೆ, ಪ್ರಗತಿ ಸಾಧಿಸಲು ಸಾಧ್ಯವಿದೆ. ಪರಿವರ್ತನೆಯ ಹರಿಕಾರರು, ತಮ್ಮ ರಾಜಸತ್ವವನ್ನು ಬಿಟ್ಟು, ಅವರು ದಾಸಶ್ರೇಷ್ಠರಾಗಿದ್ದಾರೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ಮುಂದಿನ ಸುದ್ದಿ
Show comments