Webdunia - Bharat's app for daily news and videos

Install App

ಯಡಿಯೂರಪ್ಪರಿಗೆ ಡಿಸೆಂಬರ್‌ವರೆಗೆ ಸಿಎಂ ಕುರ್ಚಿ ಭದ್ರ?

Webdunia
ಬುಧವಾರ, 29 ಜುಲೈ 2020 (22:20 IST)
ರಾಜ್ಯದ ರಾಜಕೀಯ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಡಿಸೆಂಬರ್‌ವರೆಗೆ ಸಿಎಂ ಸ್ಥಾನದಲ್ಲಿ ಸುರಕ್ಷಿತವಾಗಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

ಕೋವಿಡ್-19 ಆರ್ಭಟ ಕಡಿಮೆಯಾಗುವವರೆಗೂ ರಾಜಕೀಯ ಸಮಸ್ಯೆಗಳನ್ನು ನೋಡುವ ಮನಸ್ಥಿತಿಯಲ್ಲಿ ಹೈಕಮಾಂಡ್ ಇಲ್ಲ.

77 ವರ್ಷದ ಮುಖ್ಯಮಂತ್ರಿಯನ್ನು ಬದಲಿಸಿದರೆ ಅವರನ್ನು ಉನ್ನತ ಹುದ್ದೆಗೆ ಪರಿಗಣಿಸಬಹುದೆಂಬ ಆಶಯದೊಂದಿಗೆ ಪಕ್ಷದ ಕೆಲವು ಹಿರಿಯ ಮುಖಂಡರು ಕಾಯುತ್ತಿರುವುದು ರಾಜ್ಯದ ಜನತೆಗೆ ಗೊತ್ತಿರುವ ವಿಚಾರವಾಗಿದೆ.

20 ಶಾಸಕರನ್ನು ಮಂಡಳಿಗಳು ಮತ್ತು ನಿಗಮಗಳ ಅಧ್ಯಕ್ಷರನ್ನಾಗಿ ನೇಮಿಸಲು ಮುಖ್ಯಮಂತ್ರಿ ಮಾಡಿದ ಹಠಾತ್ ನಿರ್ಧಾರ, ಬಿಜೆಪಿ ರಾಜ್ಯ ಘಟಕದಲ್ಲಿ  ಅಸಮಧಾನಕ್ಕೆ ಕಾರಣವಾಗಿದೆ. 

ಈ ನಡುವೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸೇರಿದಂತೆ ಹಲವರು  ದೆಹಲಿ ಹೈಕಮಾಂಡ್ ಬಾಗಿಲು ತಟ್ಟಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments