Publish Date: Thu, 01 Jul 2021 (15:45 IST)
Updated Date: Thu, 01 Jul 2021 (15:46 IST)
ಬಸನಗೌಡ ಪಾಟೀಲ್ ಯತ್ನಾಳ್
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ. ರಾಜಕೀಯದಲ್ಲಿ ಏನೂ ಬೇಕಾದರೂ ಯಾವಾಗ ಬೇಕಾದರೂ ಆಗುತ್ತದೆ. ನಾನು ಆಗೊಂದು ಹೀಗೊಂದು ಮಾತನಾಡುವವನಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೆರಡು ವರ್ಷ ಸಿಎಂ ಬದಲಾವಣೆ ವಿಚಾರ ಇಲ್ಲ ಎಂದು ವಿಜಯೇಂದ್ರ ಹೇಳಿಕೆ ನೀಡಿರುವುದು ಅವರ ಮಗ ಆಗಿರುವುದರಿಂದ ಹಾಗೆ ಹೇಳ್ತಾರೆ. ನಾನು ಮುಖ್ಯಮಂತ್ರಿ ಆಗಿದ್ದರೆ ಹಾಗೆ ಹೇಳುತ್ತಿದ್ದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆ ಕಿಕ್ಬ್ಯಾಕ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಾಲಿ ಸಿಎಂ ಜೈಲಿಗೆ ಹೋದ ಉದಾಹರಣೆಗಳಿವೆ. ಹಿಂದಿನ ಇತಿಹಾಸ ತೆಗೆಯಿರಿ. ರಾಜಾಹುಲಿ ಅಂತ ಹೊಗಳಬೇಡಿ. ಯಾರ್ಯಾರು ಜೈಲಿಗೆ ಹೋಗಿದ್ದಾರೆ ಅಂತ ಲೀಸ್ಟ್ ತೆಗೆಯಿರಿ ಎಂದು ಅವರು ಹೇಳಿದರು.
ನಮ್ಮ ಪ್ರಧಾನಿಗಳಿಂದ ಭವಿಷ್ಯದ ಭಾರತ ನಿರ್ಮಾಣವಾಗುತ್ತಿದೆ. ಭ್ರಷ್ಟಾಚಾರಕ್ಕೆ ನಮ್ಮ ಪಕ್ಷ ಯಾವತ್ತು ಬಿಡಲ್ಲ. ಆದರೆ ಎಲ್ಲದಕ್ಕೂ ಕಾಲ ಕ…