Webdunia - Bharat's app for daily news and videos

Install App

ಸಿಎಂ ನಮ್ಮ ಮನೆಗೆ ಬರುವುದು ಹೊಸತಲ್ಲ: ಔತಣಕೂಟದ ಬಗ್ಗೆ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯೆ

Sampriya
ಶುಕ್ರವಾರ, 3 ಜನವರಿ 2025 (16:09 IST)
Photo Courtesy X
ಬೆಳಗಾವಿ: ನಾವು ಔತಣಕೂಟ ನಡೆಸುತ್ತಿರುವುದು ಇದು ಮೊದಲೇನಲ್ಲ ಎಂದು ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಗುರುವಾರ ರಾತ್ರಿ ಹಮ್ಮಿಕೊಂಡಿದ್ದ ಔತನಕೂಟದ ಬಗ್ಗೆ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಔತಣಕೂಟ ನಡೆಸುತ್ತಿರುವುದು ಇದೇ ಮೊದಲೇನಲ್ಲ. ಕಳೆದ 20 ತಿಂಗಳಲ್ಲಿ ಹತ್ತು ಬಾರಿ ಸೇರಿ ಚರ್ಚಿಸಿದ್ದೇವೆ. ಹೀಗಿರುವಾಗ ಈ ಸಭೆಗೆ ಮಹತ್ವ ನೀಡಬೇಕಿಲ್ಲ ಎಂದರು.

ಸಿಎಂ ಸಿದ್ದರಾಮಯ್ಯ ಅವರು ನಮ್ಮ ಮನೆಗೆ ಬರುವುದು ಹೊಸತಲ್ಲ. ನಾವು ಅವರ ಮನೆಗೆ ಹೋಗುತ್ತೇವೆ. ಅವರೂ ನಮ್ಮ ಮನೆಗೆ ಬರುತ್ತಾರೆ. ಸಿಎಂ ಜತೆಗೆ ಎಲ್ಲ ಸಚಿವರು ಮಾತನಾಡಬೇಕು ಅಂದಿದ್ದರು. ಹಾಗಾಗಿ ಹೊಸ ವರ್ಷದ ಸಂದರ್ಭದಲ್ಲಿ ಸೇರಿದ್ದೇವೆ. ಅಲ್ಲಿ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸುಧಾರಿಸಿ, 2028ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ತರುವ ವಿಚಾರವಾಗಿ ಚರ್ಚಿಸಲಾಗಿದೆಯೇ ಹೊರತು. ಸಂಪುಟ ಪುನರ್‌ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚಿಸಿಲ್ಲ ಎಂದರು.

ಸಭೆಯಲ್ಲಿ ಅಹಿಂದ ನಾಯಕರಷ್ಟೇ ಸೇರಿದ್ದೇಕೆ ಎಂಬ ಪ್ರಶ್ನೆಗೆ, ತುರ್ತಾಗಿ ಸಭೆ ನಿಗದಿಯಾಯಿತು. ಹಾಗಾಗಿ ತ್ವರಿತವಾಗಿ ಲಭ್ಯವಿರುವ ಕೆಲವರು ಸೇರಿದೆವು. ಪ್ರವಾಸ ಮತ್ತಿತರ ಕಾರಣಕ್ಕೆ ಕೆಲವರಿಗೆ ಹಾಜರಾಗಲು ಸಾಧ್ಯವಿಲ್ಲ. ಹಾಗಾಗಿ ಇದಕ್ಕೆ ರಾಜಕೀಯ ಮಹತ್ವ ನೀಡಬೇಕಿಲ್ಲ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments