Select Your Language

Notifications

webdunia
webdunia
webdunia
webdunia

ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಬಗ್ಗೆ ವ್ಯಂಗ್ಯವಾಡಿದ ಸಿಎಂ

ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಬಗ್ಗೆ ವ್ಯಂಗ್ಯವಾಡಿದ ಸಿಎಂ
ರಾಯಚೂರು , ಭಾನುವಾರ, 27 ಆಗಸ್ಟ್ 2017 (14:29 IST)
ಬರಿ ರಾಯಣ್ಣ, ಬ್ರಿಗೇಡ್ ಅಂತ ಹೋದರೆ ಏನೂ ದೊರೆಯುವುದಿಲ್ಲ ಎಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಬಗ್ಗೆ  ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಕುರುಬರ ಸಮಾವೇಶದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಸಂಗೊಳ್ಳಿ ರಾಯಣ್ಣ ಹೆಸರಲ್ಲಿ ಅನುದಾನ ನೀಡಿದ್ದೇನೆ, ಅವರ ಕಷ್ಟ ಸುಖದಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿಸಿದರು.
 
ಕೆಲವರು ಸ್ವಾರ್ಥಕ್ಕಾಗಿ ಬ್ರಿಗೇಡ್‌ಗಳನ್ನು ಹುಟ್ಟುಹಾಕುತ್ತಾರೆ. ಅದನ್ನು ಕೊನೆಯವರೆಗೂ ಉಳಿಸಿಕೊಂಡು ಹೋಗುವ ಛಲ ಇರುವುದಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.
 
ಮುಂದಿನ ಬಾರಿಯೂ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ. ಈಗಾಗಲೇ ಹಲವು ಸಮೀಕ್ಷೆಗಳು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದನ್ನು ಪ್ರಕಟಿಸಿವೆ. ಬಿಜೆಪಿ ಹತಾಷೆಯಿಂದ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತ್ಸೆ, ಪ್ರೀತ್ಸೆ ಎಂದು 9ನೇ ವಿದ್ಯಾರ್ಥಿನಿಗೆ 5 ತಿಂಗಳ ಗರ್ಭಿಣಿಯಾಗಿಸಿದ ಕಾಮುಕ