Select Your Language

Notifications

webdunia
webdunia
webdunia
webdunia

ಅಧಿಕಾರ ಸ್ವೀಕರಿಸಿದಾಗಲೇ ಪ್ರಧಾನಿ ಮೋದಿಯನ್ನು ಸೋಲಿಸುವ ಬಗ್ಗೆ ಚಿಂತನೆ ಮಾಡಿದ್ರಂತೆ ಸಿಎಂ-ಡಿಸಿಎಂ

ಅಧಿಕಾರ ಸ್ವೀಕರಿಸಿದಾಗಲೇ ಪ್ರಧಾನಿ ಮೋದಿಯನ್ನು ಸೋಲಿಸುವ ಬಗ್ಗೆ ಚಿಂತನೆ ಮಾಡಿದ್ರಂತೆ ಸಿಎಂ-ಡಿಸಿಎಂ
ತುಮಕೂರು , ಬುಧವಾರ, 3 ಏಪ್ರಿಲ್ 2019 (06:45 IST)
ತುಮಕೂರು  : ಬಾರಿಯ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರನ್ನು ಸೋಲಿಸುವುದು ನಮ್ಮ ಗುರಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸುವುದು ನಮ್ಮ ಚಿಂತನೆಯಾಗಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ.


ನಗರದಲ್ಲಿ ಮೈತ್ರಿ ಅಭ್ಯರ್ಥಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಹಾಗೂ ನಾನು ಅಧಿಕಾರ ಸ್ವೀಕರಿಸಿದಾಗಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಚಿಂತನೆ ಮಾಡಿದ್ದೇವು. ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರನ್ನು ಸೋಲಿಸುವುದು ನಮ್ಮ ಗುರಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸುವುದು ನಮ್ಮ ಚಿಂತನೆಯಾಗಿದೆ ಎಂದು ಹೇಳಿದ್ದಾರೆ.


ದೇಶದ ಪ್ರತಿಯೊಬ್ಬ ಪ್ರಜೆ ನೆಮ್ಮದಿಯಿಂದ ಬದುಕಬೇಕು. ಪ್ರತಿಯೊಬ್ಬರಿಗೂ ಮುಕ್ತ ಅವಕಾಶ ಸಿಗಬೇಕು ಎಂದು ಸಂವಿಧಾನದ ಮೊದಲನೇ ಪುಟದಲ್ಲಿ ಬರೆಯಲಾಗಿದೆ. ಆದರೆ ಬಿಜೆಪಿಯವರು ಸಂವಿಧಾನವನ್ನು ಬದಲಾವಣೆ ಮಾಡಬೇಕು ಎಂದು ಹೇಳುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಲಿಂಡರ್ ಬೆಲೆ ಏರಿಕೆ ಮಾಡಿದ ಕೇಂದ್ರ ಸರ್ಕಾರ