Webdunia - Bharat's app for daily news and videos

Install App

ನಾಳೆ ದೆಹಲಿಯತ್ತ ಸಿಎಂ, ಡಿಸಿಎಂ: ರಾಜ್ಯದ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ

Sampriya
ಸೋಮವಾರ, 29 ಜುಲೈ 2024 (10:59 IST)
Photo Courtesy X
ಬೆಂಗಳೂರು: ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರವನ್ನು ಪ್ರಶ್ನಿಸಿ ಬಿಜೆಪಿ ಬೃಹತ್ ಪ್ರತಿಭಟನೆಯನ್ನು ನಡೆಸಿ, ಇದರ ಹೊಣೆಗಾರಿಯನ್ನು ಸಿದ್ದರಾಮಯ್ಯ ಅವರು ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದಿದೆ.

ರಾಜ್ಯದಲ್ಲಿ ಮುಡಾ, ವಾಲ್ಮೀಕಿ ಹಗರಣದ ಬಿಸಿ ಏರುತ್ತಿರುವಾಗಲೇ ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಯತ್ತ ಹೊರಟಿದ್ದಾರೆ. ಇನ್ನು ನಾಳೆ ನಡೆಯುವ ಹೈಕಮಾಂಡ್ ಸಭೆಯಲ್ಲಿ ರಾಜ್ಯದ ಸಚಿವ ಸಂಪುಟದಲ್ಲಿ ಭಾರೀ ಬದಲಾವಣೆ ತರುವ ನಿರೀಕ್ಷೆಯಿದೆ.

ಕಳೆದ ಒಂದೂವರೆ ವರ್ಷದಲ್ಲಿ ಸಚಿವರ ಕಾರ್ಯವೈಖರಿ ನೋಡಿ ಅವರ ಖಾತೆಯಲ್ಲಿ ಬದಲಾವಣೆ ತರುವ ಪ್ಲಾನ್ ಮಾಡಿಕೊಳ್ಳಲಾಗಿದೆ ಎಂಬ ಮಾಹಿತಿಯಿದೆ. ಇನ್ನೂ 6 ರಿಂದ 7 ಸಚಿವರ ಖಾತೆಗಳು ಬದಲಾವಣೆ ಆದರು ಅಚ್ಚರಿಯೇನಿಲ್ಲ.  ಇನ್ನೂ ಸಚಿವ ಸಂಪುಟ ಪುನರ್ ರಚನೆ ಮಾಡದೆ ಖಾತೆಯನ್ನು ಅದಲು ಬದಲು ಮಾಡಲಿದ್ದಾರೆ ಎಂಬ ಮಾಹಿತಿಯಿದೆ.  

ಈ ಸಂಬಂಧ ನಾಳೆ ಸಿಎಂ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರು ಹೈಕಮಾಂಡ್ ನಾಯಕರ ಜತೆ ಸುದೀರ್ಘವಾಗಿ ಮಾತನಾಡಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡದವರ ಸಚಿವರ ಖಾತೆಯನ್ನು ಬದಲಾವಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಇನ್ನೂ ಈ ಸಭೆಯಲ್ಲಿ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಮುಡಾ ಹಾಗೂ ವಾಲ್ಮೀಕಿ ಹಗರಣದ ಕಪ್ಪು ಚುಕ್ಕೆಯಿಂದ ಹೊರ ಬರಲು ಏನು ಮಾಡಬೇಕೆಂಬ ವಿಷಯದ ಕುರಿತು ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ. ಈ ಮೂಲಕ ರಾಜ್ಯದ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿಯಾಗಲಿದೆ ಎಂಬ ಮಾಹಿತಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಮುಂದಿನ ಸುದ್ದಿ
Show comments