Webdunia - Bharat's app for daily news and videos

Install App

ಸಿಎಂ ಎಂಟ್ರಿಯಿಂದ ರಂಗೇರಿದ ಉಪಚುನಾವಣಾ ಕಣ

Webdunia
ಶುಕ್ರವಾರ, 31 ಮಾರ್ಚ್ 2017 (10:17 IST)
2 ಕ್ಷೇತ್ರಗಳ ಉಪಚುನಾವಣಾ ಕಣ ಇವತ್ತು ಮತ್ತಷ್ಟು ರಂಗೇರಲಿದೆ. ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟ ಸಚಿವರೊಡನೆ ಪ್ರಚಾರ ಕಣಕ್ಕೆ ಇಳಿದಿದ್ದಾರೆ. ಗುಂಡ್ಲುಪೇಟೆ ಮತ್ತು ನಂಜನಗೂಡು ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. 3ಬದಿನ ನಂಜನಗೂಡು ಮತ್ತು 3 ದಿನ ಗುಂಡ್ಲುಪೇಟೆಯಲ್ಲಿ ಪ್ರಚಾರ ನಡೆಸಲಿದ್ದು, ಇಂದಿನಿಂದ 7 ದಿನ ಸಿಎಂ ಇಲ್ಲಿಯೇ ವಾಸ್ತವ್ಯ ಹೂಡುತ್ತಿದ್ದಾರೆ.

ಇವತ್ತು ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಪರ ಸಿಎಂ ಪ್ರಚಾರ ನಡೆಸುತ್ತಿದ್ದಾರೆ. ಬದನವಾಳು, ದೇವನೂರು,ಚಿಕ್ಕ ಕವಲಂದೆ, ನೆರಳೆ ಸೇರಿದಂತೆ ಹತ್ತಾರು ಗ್ರಾಮಗಳಿಗೆ ತೆರಳಿ ಸಿಎಂ ಪ್ರಚಾರ ಮಾಡುತ್ತಿದ್ದಾರೆ. ಗುಂಡುಪೇಟೆಯಲ್ಲಿ ಸಚಿವರಾದ ಡಿ.ಕೆ. ಶಿವಕುಮಾರ್, .ಎಂ. ಬಿ. ಪಾಟೀಲ್ ಪ್ರಚಾರ ನಡೆಸುತ್ತಿದ್ದಾರೆ.

ಇತ್ತ, ಬಿಜೆಪಿಯೂ ಭರ್ಜರಿ ಪ್ರಚಾರ ನಡೆಸುತ್ತಿದೆ. ದೆಹಲಿಯ ಸಭೆಗೂ ತೆರಳದೇ ಉಪಚುನಾವಣಾ ಕಣದಲ್ಲಿ ಬೀಡು ಬಿಟ್ಟಿರುವ ಮಾಜಿ ಸಿಎಂ ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಮಾಜಿ ಸಿಚಿವರು, ಶಾಸಕರ ಜೊತೆ ಪ್ರಚಾರ ಕೈಗೊಂಡಿದ್ದಾರೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments