Select Your Language

Notifications

webdunia
webdunia
webdunia
webdunia

ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯದಿರಲು ಸಿಎಂ ಸಿರ್ಧಾರ!

ಕೆ.ಜೆ.ಜಾರ್ಜ್
ಬೆಂಗಳೂರು , ಬುಧವಾರ, 13 ಜುಲೈ 2016 (11:04 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ರಾಜೀನಾಮೆ ಪಡೆಯದಿರಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.
 
ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ರಾಜೀನಾಮೆ ಪಡೆಯದಿರಲು ನಿರ್ಧರಿಸಿದ್ದಾರೆ. ಸದನದಲ್ಲಿ ಎಲ್ಲಾ ಶಾಸಕರು ಕೆ.ಜೆ.ಜಾರ್ಜ್ ಪರ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡುತ್ತಾರಾ? ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದ್ಯಾವುದು ಇಲ್ಲ, ನೀವೆ ರಾಜೀನಾಮೆ ಪಡೆಯುವಂತೆ ಕಾಣುತ್ತಿದ್ದೀರಿ ಎಂದು ಪತ್ರಕರ್ತರ ಮೇಲೆ ಸಿಡುಕಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಾಪತ್ತೆಯಾದ ಬಾಲಕ ಫೇಸ್‌ಬುಕ್‌ನಿಂದ ಪತ್ತೆ