Select Your Language

Notifications

webdunia
webdunia
webdunia
webdunia

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

Singer S Janaki Funeral
Photo Credit X
ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆಸ್ವರ ಸಾಮ್ರಾಜ್ಞಿ ಎಸ್‌ ಜಾನಕಿಯವರ ಅಂತ್ಯಕ್ರಿಯೆಯನ್ನು ನಡೆಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. 

ಇನ್ನೂ ಎಸ್ ಜಾನಕಿ ನಿಧನದ ಬಳಿಕ ಅವರ ಕುಟುಂಬದವರನ್ನು ಸಂಪರ್ಕಿಸಿ ಸಾಂತ್ವನವನ್ನು ಹೇಳಿದ್ದಾರೆ. 

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ 'ಗಾನ ಕೋಗಿಲೆ' ಅಂತ್ಯಸಂಸ್ಕಾರ


ಮೈಸೂರಿನಲ್ಲಿ ನಿಧನರಾಗಿರುವ ಗಾನ ಕೋಗಿಲೆ ಎಸ್. ಜಾನಕಿ ಅವರ ಕುಟುಂಬ ಸದಸ್ಯರಿಗೆ 
ಮುಖ್ಯಮಂತ್ರಿಗಳಾದ ಶ್ರೀ @DKShivakumar  ಅವರು ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದರು.

ಸ್ವರ ಸಾಮ್ರಾಜ್ಞಿ ಎಸ್. ಜಾನಕಿ ಅವರ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು. 

ಸರ್ಕಾರದ ಪರವಾಗಿ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ನಿಯೋಜಿಸಲಾಗಿದೆ.

ತಮ್ಮ ಅದ್ಭುತ ಕಂಠಸಿರಿಯಿಂದ ಕೋಟ್ಯಂತರ ಹೃದಯಗಳನ್ನು ಗೆದ್ದ ಮಹಾನ್ ಗಾಯಕಿಗೆ ಗೌರವಪೂರ್ವಕ ವಿದಾಯ ಹೇಳಲು ಸರ್ಕಾರ ತೀರ್ಮಾನಿಸಿದೆ.


ಇನ್ನೂ ಎಸ್‌ ಜಾನಕಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಪೋಸ್ಟ್ ಹಂಚಿಕೊಂಡ ಡಿಕೆ ಶಿವಕುಮಾರ್‌ ಅವರು ಹಾಡು ನಿಲ್ಲಿಸಿದ ʻಕೋಗಿಲೆʼ 

ಪ್ರಖ್ಯಾತ ಗಾಯಕಿ, 'ಗಾನ ಕೋಗಿಲೆ' ಎಸ್. ಜಾನಕಿ ಅಮ್ಮ ಅವರ ನಿಧನವಾರ್ತೆ ತಿಳಿದು, ದುಃಖಿತನಾಗಿದ್ದೇನೆ. 17 ಭಾಷೆಗಳಲ್ಲಿ ತಮ್ಮ ಇಂಪಾದ ಕಂಠದ ಮೂಲಕ ಸಾವಿರಾರು ಹಾಡುಗಳನ್ನು ಹಾಡಿದ ಅವರ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಗಾಯನವನ್ನೇ ಉಸಿರಾಗಿಸಿಕೊಂಡಿದ್ದ ಜಾನಕಮ್ಮನವರು, ಅವರ ಹಾಡುಗಳ ಮೂಲಕ ಸದಾ ಸಂಗೀತಪ್ರಿಯರ ಮನಸ್ಸಿನಲ್ಲಿ ಹಸಿರಾಗಿರುತ್ತಾರೆ. 

ಅವರ ಅಸಂಖ್ಯಾತ ಅಭಿಮಾನಿಗಳು, ಆಪ್ತರು, ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ. 

Share this Story:

Follow Webdunia kannada

ಮುಂದಿನ ಸುದ್ದಿ

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ