Publish Date: Mon, 06 Jul 2026 (13:37 IST)
Updated Date: Mon, 06 Jul 2026 (13:40 IST)
ಬೆಂಗಳೂರು: ಎಸ್ಐಆರ್ ಪ್ರಕ್ರಿಯೆಗಳಲ್ಲಿ ಲೋಪಗಳಾಗುತ್ತಿರುವ ಬಗ್ಗೆ ವಿಪಕ್ಷಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಎಸ್ಐಆರ್ ಪ್ರಕ್ರಿಯೆಯಲ್ಲಿ ನಮಗೂ ಭಿನ್ನಾಭಿಪ್ರಾಯಗಳಿವೆ. ಚುನಾವಣಾ ಆಯೋಗ ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿರುವ ರೀತಿ ಬಗ್ಗೆ ನಮಗೆ ಭಿನ್ನಾಭಿಪ್ರಾಯವಿದೆ. ಆದರೆ ಆಯೋಗದ ಕೆಲಸದಲ್ಲಿ ನಾವು ಕೈ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಇಂದು ಚುನಾವಣಾ ಆಯೋಗಕ್ಕೆ ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆಗಳಲ್ಲಿ ಅಕ್ರಮವಾಗುತ್ತಿದೆ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಡಿಕೆಶಿ, ಯಾವ ರಾಜ್ಯದವರೂ ನೀಡದಷ್ಟು ಸಹಕಾರವನ್ನು ಆಯೋಗಕ್ಕೆ ನಾವು ಇಲ್ಲಿ ನೀಡುತ್ತಿದ್ದೇವೆ.
ಎಲ್ಲರಿಗೂ ಮತದಾನದ ಹಕ್ಕು ಸಿಗಬೇಕು ಎಂಬ ಉದ್ದೇಶ ನಮ್ಮದು. ಆದರೆ ಎಸ್ಐಆರ್ ಪ್ರಕ್ರಿಯೆಯಲ್ಲಿ ನಾವು ಯಾರೂ ಕೈ ಹಾಕಿಲ್ಲ. ಜನರು ಮತದಾನದ ಹಕ್ಕು ಉಳಿಸಬೇಕು ಎಂದು ಜಾಗೃತಿ ಮೂಡಿಸುವ ಕೆಲಸವನ್ನಷ್ಟೇ ಮಾಡುತ್ತಿದ್ದೇವೆ. ನಾವು ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದೇ ವಿಪಕ್ಷಗಳಿಗೆ ಭಯ ಹುಟ್ಟಿಸಿದೆ ಎಂದು ಸಿಎಂ ಹೇಳಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ