Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿಯಾದ ಮೊದಲ ದಿನವೇ ಸಚಿವರಿಗೆ ಶಾಕ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್

DK Shivakumar
ಬೆಂಗಳೂರು: ಮುಖ್ಯಮಂತ್ರಿಯಾದ ಮೊದಲ ದಿನವೇ ಸಿಎಂ ಡಿಕೆ ಶಿವಕುಮಾರ್ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಶಾಕ್ ಕೊಟ್ಟಿದ್ದಾರೆ.

ಮುಖ್ಯಮಂತ್ರಿಯಾದ ಬಳಿಕ ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್ ಸಚಿವರಿಗೆ ಚುರುಕು ಮುಟ್ಟಿಸಿದ್ದಾರೆ.  ಸಚಿವರು 24/7 ರೀತಿಯಲ್ಲಿ ಕೆಲಸ ಮಾಡಬೇಕು. ಆಡಳಿತ ವಿಚಾರದಲ್ಲಿ ಮೈಗಳ್ಳತನ ತೋರಿದರೆ ಅದನ್ನು ಸಹಿಸುವುದಿಲ್ಲ ಎಂದು ಮೊದಲ ದಿನವೇ ಎಚ್ಚರಿಕೆ ನೀಡಿದ್ದಾರೆ.

ಯಾವ ಮಂತ್ರಿಗಳನ್ನೂ ಸುಮ್ಮನೇ ಬಿಡಲ್ಲ. ದಿನದ 24 ಗಂಟೆಯೂ ಎಂಬಂತೆ ಕೆಲಸ ಮಾಡಬೇಕು. ಕೇವಲ ಬೆಂಗಳೂರಿಗೆ ಸೀಮಿತವಾಗದೇ ಎಲ್ಲಾ ಶಾಸಕರು ಮತ್ತು ಸಚಿವರು ತಮ್ಮ ವ್ಯಾಪ್ತಿಯ ಜಿಲ್ಲೆಗಳಿಗೆ ಕಡ್ಡಾಯವಾಗಿ ತೆರಳಿ ಜನರ ಸಮಸ್ಯೆಗಳಿಗೆ ಕಿವಿಯಾಗಬೇಕು ಎಂದು ಆದೇಶ ನೀಡಿದ್ದಾರೆ.

ಡಿಕೆ ಶಿವಕುಮಾರ್ ಖಡಕ್ ವ್ಯಕ್ತಿ ಎಂದು ಎಲ್ಲರಿಗೂ ಗೊತ್ತು. ಇದನ್ನು ಅವರು ಮೊದಲ ದಿನವೇ ಸಾಬೀತು ಮಾಡಿದ್ದಾರೆ. ತಮ್ಮ ಆದೇಶಗಳಿಗೆ ಬೆಲೆ ಕೊಡದೇ ಇದ್ದರೆ ಕಠಿಣ ಕ್ರಮ ಕೈಗೊಳ್ಳಲೂ ಹಿಂದೆ ಮುಂದೆ ನೋಡಲ್ಲ ಎಂದು ಸಂದೇಶ ರವಾನಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ಶಾಟ್... ವಿದ್ಯುತ್ ಶಾಕ್ ಗೆ ಸಾಯಲಿದ್ದ ಸಹೋದ್ಯೋಗಿಯನ್ನು ರೋಚಕವಾಗಿ ಕಾಪಾಡಿದ ವ್ಯಕ್ತಿ Video