ಮುಖ್ಯಮಂತ್ರಿಯಾದ ಮೊದಲ ದಿನವೇ ಸಚಿವರಿಗೆ ಶಾಕ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್

ಕೃಷ್ಣವೇಣಿ ಕೆ
ಗುರುವಾರ, 4 ಜೂನ್ 2026 (09:10 IST)
ಬೆಂಗಳೂರು: ಮುಖ್ಯಮಂತ್ರಿಯಾದ ಮೊದಲ ದಿನವೇ ಸಿಎಂ ಡಿಕೆ ಶಿವಕುಮಾರ್ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಶಾಕ್ ಕೊಟ್ಟಿದ್ದಾರೆ.

ಮುಖ್ಯಮಂತ್ರಿಯಾದ ಬಳಿಕ ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್ ಸಚಿವರಿಗೆ ಚುರುಕು ಮುಟ್ಟಿಸಿದ್ದಾರೆ.  ಸಚಿವರು 24/7 ರೀತಿಯಲ್ಲಿ ಕೆಲಸ ಮಾಡಬೇಕು. ಆಡಳಿತ ವಿಚಾರದಲ್ಲಿ ಮೈಗಳ್ಳತನ ತೋರಿದರೆ ಅದನ್ನು ಸಹಿಸುವುದಿಲ್ಲ ಎಂದು ಮೊದಲ ದಿನವೇ ಎಚ್ಚರಿಕೆ ನೀಡಿದ್ದಾರೆ.

ಯಾವ ಮಂತ್ರಿಗಳನ್ನೂ ಸುಮ್ಮನೇ ಬಿಡಲ್ಲ. ದಿನದ 24 ಗಂಟೆಯೂ ಎಂಬಂತೆ ಕೆಲಸ ಮಾಡಬೇಕು. ಕೇವಲ ಬೆಂಗಳೂರಿಗೆ ಸೀಮಿತವಾಗದೇ ಎಲ್ಲಾ ಶಾಸಕರು ಮತ್ತು ಸಚಿವರು ತಮ್ಮ ವ್ಯಾಪ್ತಿಯ ಜಿಲ್ಲೆಗಳಿಗೆ ಕಡ್ಡಾಯವಾಗಿ ತೆರಳಿ ಜನರ ಸಮಸ್ಯೆಗಳಿಗೆ ಕಿವಿಯಾಗಬೇಕು ಎಂದು ಆದೇಶ ನೀಡಿದ್ದಾರೆ.

ಡಿಕೆ ಶಿವಕುಮಾರ್ ಖಡಕ್ ವ್ಯಕ್ತಿ ಎಂದು ಎಲ್ಲರಿಗೂ ಗೊತ್ತು. ಇದನ್ನು ಅವರು ಮೊದಲ ದಿನವೇ ಸಾಬೀತು ಮಾಡಿದ್ದಾರೆ. ತಮ್ಮ ಆದೇಶಗಳಿಗೆ ಬೆಲೆ ಕೊಡದೇ ಇದ್ದರೆ ಕಠಿಣ ಕ್ರಮ ಕೈಗೊಳ್ಳಲೂ ಹಿಂದೆ ಮುಂದೆ ನೋಡಲ್ಲ ಎಂದು ಸಂದೇಶ ರವಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ಶಾಟ್... ವಿದ್ಯುತ್ ಶಾಕ್ ಗೆ ಸಾಯಲಿದ್ದ ಸಹೋದ್ಯೋಗಿಯನ್ನು ರೋಚಕವಾಗಿ ಕಾಪಾಡಿದ ವ್ಯಕ್ತಿ Video

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಹವಾಮಾನ ಎಚ್ಚರಿಕೆ

ರಾಜ್ಯಕ್ಕೆ ಡಿ.ಕೆ, ಕಾಂಗ್ರೆಸ್‌ಗೆ ಬಿ.ಕೆ: ಹರಿಪ್ರಸಾದ್ ನೂತನ ಕೆಪಿಸಿಸಿ ಅಧ್ಯಕ್ಷ

ಸಿಎಂ ಆದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಯೋಜನೆ ಘೋಷಿಸಿದ ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದ ಹಾಗೇ ಮುನಿಸು ಮರೆತು ವಿಶೇಷವಾಗಿ ವಿಶ್ ಮಾಡಿದ ಎಚ್ ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments